<p><strong>ಹುಬ್ಬಳ್ಳಿ/ಧಾರವಾಡ: ‘</strong>ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಆಪರೇಷನ್ ಸಿಂಧೂರ’ ಹೆಸರಲ್ಲಿ ಮತಯಾಚನೆ ಮಾಡುತ್ತಿರುವುದು ಖಂಡನೀಯ. ಅವರು ನಿಜವಾಗಿಯೂ ವಿಶ್ವಗುರುವಿನಂತೆ ಕೆಲಸ ಮಾಡಿದ್ದರೆ ಮತಯಾಚಿಸುವ ಅಗತ್ಯವೇ ಇರುತ್ತಿರಲಿಲ್ಲ’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.</p>.<p>ಇಲ್ಲಿ ಭಾನುವಾರ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಮೋದಿ, ಬಿಹಾರ ಚುನಾವಣೆ ಹಿನ್ನೆಯಲ್ಲಿ ಮಹಿಳೆಯರಿಗಾಗಿ ₹7,500 ಕೋಟಿ ಮೊತ್ತದ ಯೋಜನೆಗಳನ್ನು ಘೋಷಿಸಿದ್ದಾರೆ’ ಎಂದರು.</p>.<p>‘ಬಿಜೆಪಿ ಹಿಂದೂ–ಮುಸ್ಲಿಮರ ನಡುವಿನ ಸಾಮರಸ್ಯ ಹಾಳು ಮಾಡುತ್ತಿದ್ದು, ನಾವೆಲ್ಲ ಏಕತೆ ಪ್ರದರ್ಶಿಸಬೇಕಿದೆ. ಪಾಕಿಸ್ತಾನ ಅಪಾಯಕಾರಿ ಎಂದು ತಿಳಿದಿದ್ದರೂ ಆ ದೇಶದೊಂದಿಗೆ ಕ್ರಿಕೆಟ್ ಪಂದ್ಯವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ, ಐಸಿಸಿ ಅಧ್ಯಕ್ಷ ಜಯ್ ಶಾ ಏಕೆ ಆಯೋಜಿಸಿದರು’ ಎಂದು ಪ್ರಶ್ನಿಸಿದರು. </p>.<p>‘ಧರ್ಮ ಒಡೆಯಲು ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ’ ಎಂಬ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಕ್ಕೆ ಧಾರವಾಡದಲ್ಲಿ ಪ್ರತಿಕ್ರಿಯಿಸಿ, ‘ಧರ್ಮ, ಹಿಂದೂ ಒಳಪಂಗಡಗಳನ್ನು ಒಡೆಯುವವರು ಬಿಜೆಪಿಯವರು. ಹಿಂದೂ ಹೆಸರಿನಲ್ಲಿ ಬಿಜೆಪಿಯವರು ಮತ ಪಡೆದು, ಲಾಭ ಮಾಡಿಕೊಳ್ಳುತ್ತಾರೆ’ ಎಂದು ಟೀಕಿಸಿದರು.</p>.<p>‘ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ (ಇಡಬ್ಲ್ಯುಎಸ್) ಶೇ 10 ಮೀಸಲಾತಿ ಕಲ್ಪಿಸಿದ್ದು ಯಾವ ಜಾತಿಯವರಿಗೆಂದು ಸಚಿವ ಜೋಶಿ ಸ್ಪಷ್ಟಪಡಿಸಬೇಕು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ/ಧಾರವಾಡ: ‘</strong>ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಆಪರೇಷನ್ ಸಿಂಧೂರ’ ಹೆಸರಲ್ಲಿ ಮತಯಾಚನೆ ಮಾಡುತ್ತಿರುವುದು ಖಂಡನೀಯ. ಅವರು ನಿಜವಾಗಿಯೂ ವಿಶ್ವಗುರುವಿನಂತೆ ಕೆಲಸ ಮಾಡಿದ್ದರೆ ಮತಯಾಚಿಸುವ ಅಗತ್ಯವೇ ಇರುತ್ತಿರಲಿಲ್ಲ’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.</p>.<p>ಇಲ್ಲಿ ಭಾನುವಾರ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಮೋದಿ, ಬಿಹಾರ ಚುನಾವಣೆ ಹಿನ್ನೆಯಲ್ಲಿ ಮಹಿಳೆಯರಿಗಾಗಿ ₹7,500 ಕೋಟಿ ಮೊತ್ತದ ಯೋಜನೆಗಳನ್ನು ಘೋಷಿಸಿದ್ದಾರೆ’ ಎಂದರು.</p>.<p>‘ಬಿಜೆಪಿ ಹಿಂದೂ–ಮುಸ್ಲಿಮರ ನಡುವಿನ ಸಾಮರಸ್ಯ ಹಾಳು ಮಾಡುತ್ತಿದ್ದು, ನಾವೆಲ್ಲ ಏಕತೆ ಪ್ರದರ್ಶಿಸಬೇಕಿದೆ. ಪಾಕಿಸ್ತಾನ ಅಪಾಯಕಾರಿ ಎಂದು ತಿಳಿದಿದ್ದರೂ ಆ ದೇಶದೊಂದಿಗೆ ಕ್ರಿಕೆಟ್ ಪಂದ್ಯವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ, ಐಸಿಸಿ ಅಧ್ಯಕ್ಷ ಜಯ್ ಶಾ ಏಕೆ ಆಯೋಜಿಸಿದರು’ ಎಂದು ಪ್ರಶ್ನಿಸಿದರು. </p>.<p>‘ಧರ್ಮ ಒಡೆಯಲು ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ’ ಎಂಬ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಕ್ಕೆ ಧಾರವಾಡದಲ್ಲಿ ಪ್ರತಿಕ್ರಿಯಿಸಿ, ‘ಧರ್ಮ, ಹಿಂದೂ ಒಳಪಂಗಡಗಳನ್ನು ಒಡೆಯುವವರು ಬಿಜೆಪಿಯವರು. ಹಿಂದೂ ಹೆಸರಿನಲ್ಲಿ ಬಿಜೆಪಿಯವರು ಮತ ಪಡೆದು, ಲಾಭ ಮಾಡಿಕೊಳ್ಳುತ್ತಾರೆ’ ಎಂದು ಟೀಕಿಸಿದರು.</p>.<p>‘ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ (ಇಡಬ್ಲ್ಯುಎಸ್) ಶೇ 10 ಮೀಸಲಾತಿ ಕಲ್ಪಿಸಿದ್ದು ಯಾವ ಜಾತಿಯವರಿಗೆಂದು ಸಚಿವ ಜೋಶಿ ಸ್ಪಷ್ಟಪಡಿಸಬೇಕು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>