<p><strong>ಹುಬ್ಬಳ್ಳಿ</strong>: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಬುಧವಾರ ನಗರದ ಗೋಕುಲ ರಸ್ತೆಯಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿ ಭೇಟಿ ನೀಡಿ, ಅಪಘಾತ ಸ್ಥಳಗಳ ಕುರಿತು ಮಾಹಿತಿ ಪಡೆದರು.</p>.<p>ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಎಂ. ಪ್ರಿಯಾಂಗಾ ಅವರು, ಸಂಸ್ಥೆಯ ಭದ್ರತಾ ಮತ್ತು ಜಾಗೃತ ವಿಭಾಗದ ವತಿಯಿಂದ ನಡೆಸಿರುವ ಅಪಘಾತ ಸ್ಥಳಗಳ ಸಮೀಕ್ಷಾ ವರದಿಯ ದಾಖಲೆಗಳನ್ನು ಸಚಿವರಿಗೆ ನೀಡಿ, ವಿವರಿಸಿದರು. ಅಪಘಾತ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಯೋಜನೆಯ ಕುರಿತು ಚರ್ಚಿಸಿದರು.</p>.<p>ಸಚಿತ್ರವಾಗಿ ಮಾಹಿತಿ ಪಡೆದ ಸಚಿವ ಸತೀಶ ಜಾರಕಿಹೊಳಿ ಅವರು, ಸಂಸ್ಥೆ ವ್ಯಾಪ್ತಿಯ ಎಲ್ಲ ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಕರೆದು ಸಭೆ ನಡೆಸುವುದಾಗಿ ತಿಳಿಸಿದರು. ‘ಅಪಘಾತ ಸ್ಥಳಗಳಲ್ಲಿ ಯಾವೆಲ್ಲ ಮುಂಜಾಗ್ರತಾ, ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪರಿಹಾರ ಪಡೆಯಬಹುದು ಎನ್ನುವುದನ್ನು ಚರ್ಚಿಸಲಾಗುವುದು’ ಎಂದರು.</p>.<p>ಸಂಸ್ಥೆಯ ಉಪಾಧ್ಯಕ್ಷ ಸುನಿಲ ಹನುಮನ್ನವರ, ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಗಣೇಶ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಬುಧವಾರ ನಗರದ ಗೋಕುಲ ರಸ್ತೆಯಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿ ಭೇಟಿ ನೀಡಿ, ಅಪಘಾತ ಸ್ಥಳಗಳ ಕುರಿತು ಮಾಹಿತಿ ಪಡೆದರು.</p>.<p>ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಎಂ. ಪ್ರಿಯಾಂಗಾ ಅವರು, ಸಂಸ್ಥೆಯ ಭದ್ರತಾ ಮತ್ತು ಜಾಗೃತ ವಿಭಾಗದ ವತಿಯಿಂದ ನಡೆಸಿರುವ ಅಪಘಾತ ಸ್ಥಳಗಳ ಸಮೀಕ್ಷಾ ವರದಿಯ ದಾಖಲೆಗಳನ್ನು ಸಚಿವರಿಗೆ ನೀಡಿ, ವಿವರಿಸಿದರು. ಅಪಘಾತ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಯೋಜನೆಯ ಕುರಿತು ಚರ್ಚಿಸಿದರು.</p>.<p>ಸಚಿತ್ರವಾಗಿ ಮಾಹಿತಿ ಪಡೆದ ಸಚಿವ ಸತೀಶ ಜಾರಕಿಹೊಳಿ ಅವರು, ಸಂಸ್ಥೆ ವ್ಯಾಪ್ತಿಯ ಎಲ್ಲ ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಕರೆದು ಸಭೆ ನಡೆಸುವುದಾಗಿ ತಿಳಿಸಿದರು. ‘ಅಪಘಾತ ಸ್ಥಳಗಳಲ್ಲಿ ಯಾವೆಲ್ಲ ಮುಂಜಾಗ್ರತಾ, ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪರಿಹಾರ ಪಡೆಯಬಹುದು ಎನ್ನುವುದನ್ನು ಚರ್ಚಿಸಲಾಗುವುದು’ ಎಂದರು.</p>.<p>ಸಂಸ್ಥೆಯ ಉಪಾಧ್ಯಕ್ಷ ಸುನಿಲ ಹನುಮನ್ನವರ, ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಗಣೇಶ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>