‘1999 ಬ್ಯಾಚಿನ ಕೆಇಎಸ್ ಅಧಿಕಾರಿಯಾಗಿರುವ ಮಹದೇವ ಮಾಳಗಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಡಯಟ್ ಹಿರಿಯ ಉಪನ್ಯಾಸಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. 2015 ರ ಜನವರಿ 15 ರಂದು ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿರುವುದರಿಂದ, ಅವರ ದೈಹಿಕ ಸಾಮರ್ಥ್ಯ ಇಲ್ಲದಿರುವದನ್ನು ಪರಿಗಣಿಸಿ ಸರ್ಕಾರ ಸ್ವಯಂ ನಿವೃತ್ತಿ ಆದೇಶ ನೀಡಿದೆ. ಇದರಿಂದ ಅವರಿಗೆ ನಿವೃತ್ತಿ ನಂತರದ ಎಲ್ಲಾ ಸೌಲಭ್ಯಗಳು ದೊರೆಯಲಿವೆ. ಕುಟುಂಬದ ಸದಸ್ಯರು ಅನುಕಂಪ ಆಧಾರಿತ ನೌಕರಿಗೆ ಮನವಿ ಮಾಡಿದ್ದಾರೆ.ಇದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಬೇಕಾದ ವಿಷಯವಾಗಿರುವದರಿಂದ ಮುಂಬರುವ ದಿನಗಳಲ್ಲಿ ವಿಷಯವನ್ನು ಸಭೆಗೆ ಮಂಡಿಸಲು ತಮ್ಮ ಶಕ್ತಿಮೀರಿದ ಪ್ರಯತ್ನ ಮಾಡುತ್ತೇನೆ, ಮುಖ್ಯಮಂತ್ರಿಗಳು ಈ ಕುರಿತು ನಿರ್ಣಯ ಕೈಗೊಳ್ಳುವ ಅಧಿಕಾರ ಹೊಂದಿದ್ದಾರೆ’ಎಂದು ಸಚಿವರಾದ ಸುರೇಶಕುಮಾರ್ ಹೇಳಿದರು.