ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಸಿದ್ದರಾಮಯ್ಯ ಟಗರು, ಹುಲಿ ಇದ್ದಂಗೆ, ಹೆದರುವ ಪ್ರಶ್ನೆಯೇ ಇಲ್ಲ: ಸಚಿವ ಜಮೀರ್‌

Published : 1 ಸೆಪ್ಟೆಂಬರ್ 2024, 15:41 IST
Last Updated : 1 ಸೆಪ್ಟೆಂಬರ್ 2024, 15:41 IST
ಫಾಲೋ ಮಾಡಿ
Comments
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ
ಬಾಲಸುಟ್ಟ ಬೆಕ್ಕು ಸಿಎಂ ಸಿದ್ದರಾಮಯ್ಯ: ಜೋಶಿ
ಹುಬ್ಬಳ್ಳಿ: ‘ಮುಡಾ‘ ನಿವೇಶನ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಾಬರಿಯಾಗಿ ಬಾಲಸುಟ್ಟ ಬೆಕ್ಕಿನಂತೆ ಓಡಾಡುತ್ತಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು. ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಸಿದ್ದರಾಮಯ್ಯ ಟಗರೋ ಹುಲಿನೋ ಸಿಂಹನೋ ಕುರಿನೋ ಎಂದು ನಾವು ಹೇಳಿಲ್ಲ. ನೈತಿಕ ಹೊಣೆಹೊತ್ತು ಅವರು ರಾಜೀನಾಮೆ ನೀಡಬೇಕು ಎಂದಿದ್ದೇವೆ’ ಎಂದು ‘ಸಿದ್ದರಾಮಯ್ಯ ಟಗರು’ ಎಂದು ಸಚಿವ ಜಮೀರ್‌ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದರು. ‘ಸಿದ್ದರಾಮಯ್ಯ ಅವರಿಗೆ ಏನು ಮಾಡಬೇಕೆಂದು ತೋಚುತ್ತಿಲ್ಲ. ದಿನ ಬೆಳಗಾದರೆ ರಾಜ್ಯಪಾಲರ ಭೇಟಿ ಮಾಧ್ಯಮಗಳಿಗೆ ಒಂದೊಂದು ಹೇಳಿಕೆ ನೀಡುವುದು ಮಾಡುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್‌ ಮೊರೆ ಹೋಗಿದ್ದಾರೆ ಎಂದಾದರೆ ಆದೇಶ ಬರುವವರೆಗೆ ಕಾಯಲಿ. ನ್ಯಾಯ ಸಿಗುತ್ತದೆ ಎಂದು ಹೇಳಲಿ ನೋಡೋಣ. ಅದನ್ನು ಬಿಟ್ಟು ಕೋವಿಡ್‌ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರ ತನಿಖೆ ನಡೆಸುತ್ತೇವೆ ಹಾಗೆ ಮಾಡುತ್ತೇವೆ ಹೀಗೆ ಮಾಡುತ್ತೇವೆ ಎಂದು ದಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಯಾಕೆ’ ಎಂದು ಪ್ರಶ್ನಿಸಿದರು. ‘ಭಾವನಾತ್ಮಕವಾಗಿ ಮಾತನಾಡಿ ಬ್ಲ್ಯಾಕ್‌ಮೇಲ್‌ ಮಾಡುವ ತಂತ್ರ ಹಾಗೂ ನಾಟಕಗಳನ್ನು ಅವರು ಬಂದ್‌  ಮಾಡಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT