ಹುಬ್ಬಳ್ಳಿಯ ಉಣಕಲ್ ಕೆರೆ ಅಭಿವೃದ್ಧಿ, ಜನತಾ ಬಜಾರ್ನಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ, ಕ್ರೀಡಾ ಸಂಕೀರ್ಣ ಹಾಗೂ ಕಮಾಂಡಿಂಗ್ ಸೆಂಟರ್ ಸೇರಿದಂತೆ, ವಿವಿಧ ಕಾಮಗಾರಿಗಳ ಪ್ರಗತಿಯ ಕುರಿತು ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು. ಉಣಕಲ್ ಕೆರೆ ಅಭಿವೃದ್ಧಿ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು ಮತ್ತು ಶಾಸಕರು, ಬೇಗನೆ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದರು.