<p><strong>ಹುಬ್ಬಳ್ಳಿ</strong>: ಇಲ್ಲಿನ ಸಿದ್ಧಾರೂಢ ಮಠದ ಧರ್ಮದರ್ಶಿಯಾಗಿದ್ದ ಸಿದ್ದನಗೌಡ ಪಾಟೀಲ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳ ಒಳಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಮಠದ ಟ್ರಸ್ಟ್ ಕಮಿಟಿ ಆಡಳಿತಾಧಿಕಾರಿಯೂ ಆಗಿರುವ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್.ಭಾರತಿ ಆದೇಶಿಸಿದ್ದಾರೆ.</p>.<p>ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಚ್.ಆರ್.ದೇಶಪಾಂಡೆ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಲಾಗಿದೆ. ವಿಚಾರಣೆ ಮುಗಿಯುವವರೆಗೆ ಸಿದ್ಧನಗೌಡ ಪಾಟೀಲ ಅವರು ಧರ್ಮದರ್ಶಿತ್ವದ ಕಾರ್ಯಗಳಲ್ಲಿ ಭಾಗವಹಿಸದಂತೆಯೂ ಆದೇಶಿಸಲಾಗಿದೆ.</p>.<p>ಸಿದ್ದನಗೌಡ ಪಾಟೀಲ ಅವರು ಮಠದ ಹೆಸರಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಭಕ್ತರಿಂದ ದೇಣಿಗೆ ಸಂಗ್ರಹಿಸಿ, ಮಠಕ್ಕೆ ನೀಡದೆ ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಠದ ಭಕ್ತರು ಒತ್ತಾಯಿಸಿದ್ದರು.</p>.<p>ಆರೋಪ ಕೇಳಿ ಬಂದ ತಕ್ಷಣ ಅವರನ್ನು ಧರ್ಮದರ್ಶಿ ಸ್ಥಾನದಿಂದ ಅಮಾನತು ಮಾಡಲಾಗಿತ್ತು. ಅವರನ್ನು ವಜಾ ಮಾಡಬೇಕು ಎಂದು ಭಕ್ತರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಇಲ್ಲಿನ ಸಿದ್ಧಾರೂಢ ಮಠದ ಧರ್ಮದರ್ಶಿಯಾಗಿದ್ದ ಸಿದ್ದನಗೌಡ ಪಾಟೀಲ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳ ಒಳಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಮಠದ ಟ್ರಸ್ಟ್ ಕಮಿಟಿ ಆಡಳಿತಾಧಿಕಾರಿಯೂ ಆಗಿರುವ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್.ಭಾರತಿ ಆದೇಶಿಸಿದ್ದಾರೆ.</p>.<p>ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಚ್.ಆರ್.ದೇಶಪಾಂಡೆ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಲಾಗಿದೆ. ವಿಚಾರಣೆ ಮುಗಿಯುವವರೆಗೆ ಸಿದ್ಧನಗೌಡ ಪಾಟೀಲ ಅವರು ಧರ್ಮದರ್ಶಿತ್ವದ ಕಾರ್ಯಗಳಲ್ಲಿ ಭಾಗವಹಿಸದಂತೆಯೂ ಆದೇಶಿಸಲಾಗಿದೆ.</p>.<p>ಸಿದ್ದನಗೌಡ ಪಾಟೀಲ ಅವರು ಮಠದ ಹೆಸರಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಭಕ್ತರಿಂದ ದೇಣಿಗೆ ಸಂಗ್ರಹಿಸಿ, ಮಠಕ್ಕೆ ನೀಡದೆ ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಠದ ಭಕ್ತರು ಒತ್ತಾಯಿಸಿದ್ದರು.</p>.<p>ಆರೋಪ ಕೇಳಿ ಬಂದ ತಕ್ಷಣ ಅವರನ್ನು ಧರ್ಮದರ್ಶಿ ಸ್ಥಾನದಿಂದ ಅಮಾನತು ಮಾಡಲಾಗಿತ್ತು. ಅವರನ್ನು ವಜಾ ಮಾಡಬೇಕು ಎಂದು ಭಕ್ತರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>