<p><strong>ಹುಬ್ಬಳ್ಳಿ</strong>: ಸ್ಮಾರ್ಟ್ ಸಿಟಿ ಯೋಜನೆಯಡಿ ಗಣೇಶಪೇಟೆಯಲ್ಲಿ₹5.6 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಮೀನು ಮಾರುಕಟ್ಟೆಯ ಕಾಮಗಾರಿಯನ್ನು ಶಾಸಕ ಪ್ರಸಾದ ಅಬ್ಬಯ್ಯ ಶುಕ್ರವಾರ ಪರಿಶೀಲಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಮಾರುಕಟ್ಟೆಯನ್ನು ಹೈಟೆಕ್ ಮಾಡಬೇಕು ಎಂಬುದು ಬಹುದಿನಗಳ ಕನಸಾಗಿದೆ. ಗುಣಮಟ್ಟದಲ್ಲಿ ಯಾವುದೇ ರೀತಿಯಲ್ಲೂ ರಾಜಿಯಾಗದೆ ಸುಸಜ್ಜಿತವಾಗಿ ಮಾರುಕಟ್ಟೆ ನಿರ್ಮಿಸಬೇಕು’ ಎಂದರು.</p>.<p>‘ಯೋಜನೆ ಪ್ರಕಾರ ಮಾರುಕಟ್ಟೆಯ ಒಳಗಡೆ 38 ಮಳಿಗೆಗಳನ್ನು ನಿರ್ಮಿಸಬಹುದಾಗಿದೆ. ಆದರೆ, ವ್ಯಾಪಾರಿಗಳಿಗೆ ಅದು ಸೂಕ್ತವೆನಿಸುತ್ತಿಲ್ಲ. ಮೀನು ವ್ಯಾಪಾರಸ್ಥರ ಒತ್ತಾಯಿಸುವಂತೆ ಮಳಿಗೆಗಳನ್ನು ಇನ್ನಷ್ಟು ವಿಸ್ತಾರಗೊಳಿಸಿ 36 ಮಳಿಗೆಗಳನ್ನು ನಿರ್ಮಿಸಬೇಕು. ಅದಕ್ಕಾಗಿ, ಪರಿಷ್ಕೃತ ಯೋಜನೆಯನ್ನು ರೂಪಿಸಬೇಕು’ ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಮೀನು ಮಾರುಕಟ್ಟೆಯ ಸ್ವಚ್ಛತೆಗೆ ನೀರಿನ ಅವಶ್ಯಕತೆ ಹೆಚ್ಚಾಗಿದೆ. ಸದ್ಯ ಇರುವ ಕೊಳವೆಬಾವಿಯ ಜೊತೆಗೆ, ಮತ್ತೊಂದನ್ನು ಕೊರೆಯಿಸಿ’ ಎಂದು ಜಲಮಂಡಳಿ ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ಪಾಲಿಕೆ ಸದಸ್ಯರಾದ ಇಲಿಯಾಸ್ ಮನಿಯಾರ್, ನಿರಂಜನ ಹಿರೇಮಠ, ಮುಖಂಡರಾದ ಅಬ್ದುಲ್ ಹಮೀದ್ ಖೈರಾತಿ, ಫರ್ವೇಜ್ ಕೊಣ್ಣೂರು, ಇರ್ಷಾದ್ ಕುಸುಗಲ್, ಎಂಜಿನಿಯರ್ ಎನ್.ಎಚ್. ತಡಕೋಡ, ಪಾಲಿಕೆಯ ವಲಯಾಧಿಕಾರಿ ಬಸವರಾಜ ಲಮಾಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಸ್ಮಾರ್ಟ್ ಸಿಟಿ ಯೋಜನೆಯಡಿ ಗಣೇಶಪೇಟೆಯಲ್ಲಿ₹5.6 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಮೀನು ಮಾರುಕಟ್ಟೆಯ ಕಾಮಗಾರಿಯನ್ನು ಶಾಸಕ ಪ್ರಸಾದ ಅಬ್ಬಯ್ಯ ಶುಕ್ರವಾರ ಪರಿಶೀಲಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಮಾರುಕಟ್ಟೆಯನ್ನು ಹೈಟೆಕ್ ಮಾಡಬೇಕು ಎಂಬುದು ಬಹುದಿನಗಳ ಕನಸಾಗಿದೆ. ಗುಣಮಟ್ಟದಲ್ಲಿ ಯಾವುದೇ ರೀತಿಯಲ್ಲೂ ರಾಜಿಯಾಗದೆ ಸುಸಜ್ಜಿತವಾಗಿ ಮಾರುಕಟ್ಟೆ ನಿರ್ಮಿಸಬೇಕು’ ಎಂದರು.</p>.<p>‘ಯೋಜನೆ ಪ್ರಕಾರ ಮಾರುಕಟ್ಟೆಯ ಒಳಗಡೆ 38 ಮಳಿಗೆಗಳನ್ನು ನಿರ್ಮಿಸಬಹುದಾಗಿದೆ. ಆದರೆ, ವ್ಯಾಪಾರಿಗಳಿಗೆ ಅದು ಸೂಕ್ತವೆನಿಸುತ್ತಿಲ್ಲ. ಮೀನು ವ್ಯಾಪಾರಸ್ಥರ ಒತ್ತಾಯಿಸುವಂತೆ ಮಳಿಗೆಗಳನ್ನು ಇನ್ನಷ್ಟು ವಿಸ್ತಾರಗೊಳಿಸಿ 36 ಮಳಿಗೆಗಳನ್ನು ನಿರ್ಮಿಸಬೇಕು. ಅದಕ್ಕಾಗಿ, ಪರಿಷ್ಕೃತ ಯೋಜನೆಯನ್ನು ರೂಪಿಸಬೇಕು’ ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಮೀನು ಮಾರುಕಟ್ಟೆಯ ಸ್ವಚ್ಛತೆಗೆ ನೀರಿನ ಅವಶ್ಯಕತೆ ಹೆಚ್ಚಾಗಿದೆ. ಸದ್ಯ ಇರುವ ಕೊಳವೆಬಾವಿಯ ಜೊತೆಗೆ, ಮತ್ತೊಂದನ್ನು ಕೊರೆಯಿಸಿ’ ಎಂದು ಜಲಮಂಡಳಿ ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ಪಾಲಿಕೆ ಸದಸ್ಯರಾದ ಇಲಿಯಾಸ್ ಮನಿಯಾರ್, ನಿರಂಜನ ಹಿರೇಮಠ, ಮುಖಂಡರಾದ ಅಬ್ದುಲ್ ಹಮೀದ್ ಖೈರಾತಿ, ಫರ್ವೇಜ್ ಕೊಣ್ಣೂರು, ಇರ್ಷಾದ್ ಕುಸುಗಲ್, ಎಂಜಿನಿಯರ್ ಎನ್.ಎಚ್. ತಡಕೋಡ, ಪಾಲಿಕೆಯ ವಲಯಾಧಿಕಾರಿ ಬಸವರಾಜ ಲಮಾಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>