ಪಾಲಿಕೆ ಕಚೇರಿಯಲ್ಲಿ ಭಾನುವಾರ ಆಯುಕ್ತರು ಹಾಗೂ ವಲಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಮಳೆಯಿಂದಾಗಿ ಹಳೇ ಹುಬ್ಬಳ್ಳಿ ಭಾಗದಲ್ಲಿ ಸಾಕಷ್ಟು ಹಾನಿಯಾಗಿದ್ದು, ಸಾಂಕ್ರಮಿಕ ರೋಗಗಳ ಭೀತಿ ಆವರಿಸಿದೆ. ಆ ಪ್ರದೇಶದಲ್ಲಿ ಆದ್ಯತೆ ಮೇರೆಗೆ ಗಟಾರಗಳ ಸ್ವಚ್ಛತೆ ಹಾಗೂ ಫಾಗಿಂಗ್ ಕೆಲಸ ನಡೆಯಬೇಕು. ಅಲ್ಲಿ ಕೈಗೊಳ್ಳುವ ಕೆಲಸಗಳ ಬಗ್ಗೆ ನಿತ್ಯ ವರದಿ ಸಲ್ಲಿಸಬೇಕು’ ಎಂದರು.