ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಇಲ್ಲಿರುವ ದರ್ಗಾದಿಂದ ವಾಹನಗಳ ಸಂಚಾರಕ್ಕಾಗಲಿ, ಸಾರ್ವಜನಿಕರ ಓಡಾಟಕ್ಕಾಗಲಿ ಯಾವುದೇ ಸಮಸ್ಯೆ ಇರಲಿಲ್ಲ. ರಾಜಕೀಯ ಪ್ರೇರಿತವಾಗಿ, ಚುನಾವಣೆ ಹಿನ್ನೆಲೆಯಲ್ಲಿ ತೆರವು ಮಾಡಲಾಗುತ್ತಿದೆ. ಉಣಕಲ್ ಸಿದ್ದಪ್ಪಜ್ಜನ ಗುಡಿ ಎದುರು ಪ್ಲೈಓವರ್ ನಿರ್ಮಿಸಿದಂತೆ, ಇಲ್ಲಿಯೂ ನಿರ್ಮಿಸಿ ದರ್ಗಾ ಉಳಿಸಬಹುದಿತ್ತು. ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ವಿಷಯ ಪ್ರಸ್ತಾವ ಮಾಡುತ್ತೇನೆ' ಎಂದರು.