‘ಬಂಕಾಪುರ ಚೌಕ್, ದರ್ಗಾ, ಕಮರಿಪೇಟೆ, ನ್ಯೂ ಇಂಗ್ಲಿಷ್ ಶಾಲೆ ಮತ್ತು ಇನ್ನಿತರ ರಸ್ತೆಗಳಲ್ಲಿ ಅತಿಕ್ರಮಣ ಮಾಡಿದ್ದನ್ನು ನಾವು ಪ್ರಶ್ನಿಸುವಂತಿಲ್ಲ. ಮೀನು ಮಾರುಕಟ್ಟೆಯಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಜನ ಹಾಗೂ ಅಧಿಕಾರಿಗಳು ಹೇಳಿದರೂ ಶಾಸಕರು ಕೇಳುತ್ತಿಲ್ಲ. ನಗರದ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮತ್ತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಧ್ಯೆ ಪ್ರವೇಶಿಸಬೇಕು’ ಎಂದು ಒತ್ತಾಯಿಸಿದರು.