<p><strong>ಹುಬ್ಬಳ್ಳಿ:</strong> ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಅವರು ವಾಪಸ್ ಬಿಜೆಪಿ ಸೇರಿದ್ದು, ಪಕ್ಷದ ವರಿಷ್ಠರು ತೆಗೆದುಕೊಂಡಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.</p><p>ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಮುನಿಸು ಇಲ್ಲ. ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಅನೇಕ ಕಾಂಗ್ರೆಸ್, ಜೆಡಿಎಸ್ ನಾಯಕರು ಈಗಾಗಲೇ ಬಿಜೆಪಿಗೆ ಬಂದಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದರು.</p><p>ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವುದೊಂದೆ ನಮ್ಮ ಗುರಿ. ಅದರ ಮುಂದೆ ಎಲ್ಲವೂ ನಗಣ್ಯ ಎಂದರು.</p><p>ಧಾರವಾಡ ಲೋಕಸಭಾ ಕ್ಷೇತ್ರದಿಂದ ಜಗದೀಶ ಶೆಟ್ಟರ್ ಅವರು ಅಭ್ಯರ್ಥಿಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಈಗಾಗಲೇ ಪ್ರಲ್ಹಾದ ಜೋಶಿ ಅವರು ಸಂಸದ, ಕೇಂದ್ರ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ವಿಷಯವಾಗಿ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ ಎಂದು ಹೇಳಿದರು.</p><p>ಇದಕ್ಕೂ ಮುನ್ನ ಬೆಳಿಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಟೆಂಗಿನಕಾಯಿ, ಪಕ್ಷಕ್ಕೆ ಯಾವುದೇ ವ್ಯಕ್ತಿ ಅನಿವಾರ್ಯ ಅಲ್ಲ. ಬಿಜೆಪಿ ಬಲಿಷ್ಠವಾಗಿದೆ. ಶೆಟ್ಟರ್ ಅವರಿಗೆ ಕಾಂಗ್ರೆಸ್ ಬೇಸರವಾದ ಕುರಿತು ನನಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು ಎಂದಿದ್ದರು.</p><p>ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಜಗದೀಶ ಶೆಟ್ಟರ್ ಕಾಂಗ್ರೆಸ್ಗೆ ಸೇರಿ, ಹುಬ್ಬಳ್ಳಿ ಧಾರವಾಡ ಸೆಂಟಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಮಹೇಶ ಟೆಂಗಿನಕಾಯಿ ವಿರುದ್ಧ ಸೋಲು ಕಂಡಿದ್ದರು.</p>.ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿದ ಜಗದೀಶ ಶೆಟ್ಟರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಅವರು ವಾಪಸ್ ಬಿಜೆಪಿ ಸೇರಿದ್ದು, ಪಕ್ಷದ ವರಿಷ್ಠರು ತೆಗೆದುಕೊಂಡಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.</p><p>ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಮುನಿಸು ಇಲ್ಲ. ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಅನೇಕ ಕಾಂಗ್ರೆಸ್, ಜೆಡಿಎಸ್ ನಾಯಕರು ಈಗಾಗಲೇ ಬಿಜೆಪಿಗೆ ಬಂದಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದರು.</p><p>ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವುದೊಂದೆ ನಮ್ಮ ಗುರಿ. ಅದರ ಮುಂದೆ ಎಲ್ಲವೂ ನಗಣ್ಯ ಎಂದರು.</p><p>ಧಾರವಾಡ ಲೋಕಸಭಾ ಕ್ಷೇತ್ರದಿಂದ ಜಗದೀಶ ಶೆಟ್ಟರ್ ಅವರು ಅಭ್ಯರ್ಥಿಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಈಗಾಗಲೇ ಪ್ರಲ್ಹಾದ ಜೋಶಿ ಅವರು ಸಂಸದ, ಕೇಂದ್ರ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ವಿಷಯವಾಗಿ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ ಎಂದು ಹೇಳಿದರು.</p><p>ಇದಕ್ಕೂ ಮುನ್ನ ಬೆಳಿಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಟೆಂಗಿನಕಾಯಿ, ಪಕ್ಷಕ್ಕೆ ಯಾವುದೇ ವ್ಯಕ್ತಿ ಅನಿವಾರ್ಯ ಅಲ್ಲ. ಬಿಜೆಪಿ ಬಲಿಷ್ಠವಾಗಿದೆ. ಶೆಟ್ಟರ್ ಅವರಿಗೆ ಕಾಂಗ್ರೆಸ್ ಬೇಸರವಾದ ಕುರಿತು ನನಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು ಎಂದಿದ್ದರು.</p><p>ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಜಗದೀಶ ಶೆಟ್ಟರ್ ಕಾಂಗ್ರೆಸ್ಗೆ ಸೇರಿ, ಹುಬ್ಬಳ್ಳಿ ಧಾರವಾಡ ಸೆಂಟಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಮಹೇಶ ಟೆಂಗಿನಕಾಯಿ ವಿರುದ್ಧ ಸೋಲು ಕಂಡಿದ್ದರು.</p>.ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿದ ಜಗದೀಶ ಶೆಟ್ಟರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>