ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಪ್ರಕರಣದಲ್ಲಿ ಎಸ್ ಐಟಿ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿರುವ ಲಕ್ಷಣ ಗೋಚರಿಸುತ್ತಿಲ್ಲ' ಎಂದರು.
'ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂಬುದು ನಮ್ಮ ಆಗ್ರಹವೂ ಆಗಿದೆ. ಯಾರನ್ನೂ ಕ್ಷಮಿಸುವ ಮಾತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು' ಎಂದು ಆಗ್ರಹಿಸಿದರು.
'ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸುವ ಕುರಿತಾಗಿ ಮೇ 11 ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಅವಲೋಕನಾ ಸಭೆಯಲ್ಲಿ ವರಿಷ್ಠರು ತೀರ್ಮಾನ ಕೈಗೊಳ್ಳುವರು' ಎಂದರು.