<p><strong>ಹುಬ್ಬಳ್ಳಿ</strong>: ‘ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರದ್ದು ಪಡಿಸಿದ್ದ ರಾಜ್ಯ ಸರ್ಕಾರಕ್ಕೆ ಕೋರ್ಟ್ ಛೀಮಾರಿ ಹಾಕಿದ್ದು, ಪ್ರಕರಣ ಇದೀಗ ಮತ್ತೆ ಪುನಃ ವಿಚಾರಣೆಗೆ ಬರಲಿದೆ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಕಲ್ಲು ಹೊಡೆದವರನ್ನು ಅಮಾಯಕರು ಎಂದು ಕಾಂಗ್ರೆಸ್ ಸರ್ಕಾರ ಹೇಳಿ, ಅವರ ಮೇಲಿದ್ದ ಪ್ರಕರಣವನ್ನು ರದ್ದು ಪಡಿಸಿತ್ತು. ಅದು ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸವಾಗಿತ್ತು. ಕೋರ್ಟ್ ನಿರ್ಧಾರದಿಂದ ಸರ್ಕಾರಕ್ಕೆ ಮುಖಭಂಗವಾಗಿದೆ’ ಎಂದರು.</p>.<p>‘ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಕಾಂಗ್ರೆಸ್ ಏನುಬೇಕಾದರೂ ಮಾಡುತ್ತದೆ. ಸಮಾಜ ಘಾತುಕ ಶಕ್ತಿಗಳಿಗೆ ಯಾವ ಪಕ್ಷದವರೂ ಪ್ರೋತ್ಸಾಹ ನೀಡಬಾರದು. ಇನ್ನುಮುಂದೆ ಯಾರು ಸಹ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರದ್ದು ಪಡಿಸಿದ್ದ ರಾಜ್ಯ ಸರ್ಕಾರಕ್ಕೆ ಕೋರ್ಟ್ ಛೀಮಾರಿ ಹಾಕಿದ್ದು, ಪ್ರಕರಣ ಇದೀಗ ಮತ್ತೆ ಪುನಃ ವಿಚಾರಣೆಗೆ ಬರಲಿದೆ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಕಲ್ಲು ಹೊಡೆದವರನ್ನು ಅಮಾಯಕರು ಎಂದು ಕಾಂಗ್ರೆಸ್ ಸರ್ಕಾರ ಹೇಳಿ, ಅವರ ಮೇಲಿದ್ದ ಪ್ರಕರಣವನ್ನು ರದ್ದು ಪಡಿಸಿತ್ತು. ಅದು ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸವಾಗಿತ್ತು. ಕೋರ್ಟ್ ನಿರ್ಧಾರದಿಂದ ಸರ್ಕಾರಕ್ಕೆ ಮುಖಭಂಗವಾಗಿದೆ’ ಎಂದರು.</p>.<p>‘ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಕಾಂಗ್ರೆಸ್ ಏನುಬೇಕಾದರೂ ಮಾಡುತ್ತದೆ. ಸಮಾಜ ಘಾತುಕ ಶಕ್ತಿಗಳಿಗೆ ಯಾವ ಪಕ್ಷದವರೂ ಪ್ರೋತ್ಸಾಹ ನೀಡಬಾರದು. ಇನ್ನುಮುಂದೆ ಯಾರು ಸಹ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>