ಹುಬ್ಬಳ್ಳಿ: ಕೋವಿಡ್ –19 ದೃಢಪಟ್ಟಿರುವ ನವಲಗುಂದ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ, ಅವರ ಅಭಿಮಾನಿಗಳು ಗುರುವಾರ ನಗರದ ಶಿರಡಿನಗರದಲ್ಲಿರುವ ಸಾಯಿಬಾಬಾ ಮಂದಿರದ ಮೆಟ್ಟಿಲುಗಳನ್ನು ಮಂಡಿಗಾಲಿನಲ್ಲಿ ಏರಿದರು.
ಅಭಿಮಾನಿಗಳಾದಮಂಜುನಾಥ ಹೆಬಸೂರ, ವಿಜಯಕಾಂತ ನಿಡವಣಿ, ಶಂಕರಗೌಡ ಪಾಟೀಲ, ಸಂತೋಷ ಹಿರೇಮಠ, ಅಣ್ಣಪ್ಪ, ದ್ಯಾಮಣಗೌಡ, ಕಿರಣ ಮಂಡಿಯಲ್ಲೇ ಮೆಟ್ಟಿಲುಗಳನ್ನು ಏರಿದರು. ಬಳಿಕ ಬಾಬಾಗೆ ವಿಶೇಷ ಪೂಜೆ ಸಲ್ಲಿಸಿ, ತಮ್ಮ ನೆಚ್ಚಿನ ನಾಯಕ ಕೋವಿಡ್ನಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.
ಮುನೇನಕೊಪ್ಪ ಅವರಿಗೆ ಸೆ. 30ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಕುರಿತು ಅವರು, ಟ್ವೀಟ್ ಮಾಡಿದ್ದರು.