ಮಂಗಳವಾರ ಮಂಡನೆಯಾದ ಕೇಂದ್ರ ಬಜೆಟ್ಗೆ ಪ್ರತಿಕ್ರಿಯಿಸಿರುವ ಅವರು ‘ಗ್ರಾಮೀಣ ಭಾಗದ ದುಡಿಯುವ ಕೈಗಳಿಗೆ ಆಸರೆಯಾಗಿದ್ದ ಉದ್ಯೋಗ ಖಾತ್ರಿ ಯೋಜನೆಗೆ ಮೀಸಲಿಟ್ಟಿದ್ದ ₹73 ಸಾವಿರ ಕೋಟಿ ಅನುದಾನವನ್ನು ₹25 ಸಾವಿರ ಕೋಟಿಗೆ ಕಡಿತಗೊಳಿಸಿದ್ದರಿಂದ ದುಡಿಯುವ ವರ್ಗಕ್ಕೆ ಕೊಡಲಿ ಪೆಟ್ಟು ಬೀಳಲಿದೆ. ಅಡುಗೆ ಅನಿಲದ ಸಬ್ಸಿಡಿಯನ್ನೂ ಸದ್ದಿಲ್ಲದೇ ನಿಲ್ಲಿಸಿದ ಕೇಂದ್ರ ಸರ್ಕಾರ, ರೈತರ ಆದಾಯ ದ್ವಿಗುಣಕ್ಕೂ ಯಾವುದೇ ಕ್ರಮ ವಹಿಸಿಲ್ಲ. ಬೆಲೆ ಏರಿಕೆ ನಿಯಂತ್ರಣಕ್ಕೆ ಪೂರಕವಾದ ಕ್ರಮ ಕೈಗೊಂಡಿಲ್ಲ’ ಎಂದು ಟೀಕಿಸಿದ್ದಾರೆ.