ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಲ್ಲದ ಅವರ ತಂದೆಯೊಂದಿಗೂ ಶಾಸಕನಾಗಿ ಕೆಲಸ ಮಾಡಿದ್ದೇನೆ. ನಿಮ್ಮ ತಂದೆಯವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಿರಿ. ರಾಜಕೀಯದಲ್ಲಿ ದೂರದೃಷ್ಟಿ ಇಟ್ಟುಕೊಂಡು ಕೆಲಸ ಮಾಡಬೇಕಾಗುತ್ತದೆ. ಅವರು ಮುಖ್ಯಮಂತ್ರಿಯಾದರೆ ಸಂತೋಷ. ಇವತ್ತಿನ ಸಂದರ್ಭದಲ್ಲಿ ಅದು ಸುಲಭದ ಮಾತಲ್ಲ. ತಾಳ್ಮೆಯಿಂದ ವರ್ತಿಸಿದರೆ ಒಳ್ಳೆಯದು’ ಎಂದರು.