<p><strong>ಹುಬ್ಬಳ್ಳಿ:</strong> ‘ಶಬರಿನಗರದ ಜನರ ಜಾಗದ ಸಮಸ್ಯೆಗಳನ್ನು ಪರಿಹರಿಸಿಕೊಟ್ಟ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಮಾರ್ಚ್ 22ರಂದು ಸಂಜೆ 5 ಗಂಟೆಗೆ ಕುಸುಗಲ್ ರಸ್ತೆಯ ಶಬರಿನಗರದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಇಲ್ಲಿನ ಶಬರಿನಗರ ನಿವಾಸಿ ಶಂಕರಪ್ಪ ಸುಂಕದ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2014ರಲ್ಲಿ ವ್ಯಕ್ತಿಯೊಬ್ಬರು ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನಮ್ಮನ್ನು ಜಾಗ ಖಾಲಿ ಮಾಡಿಸಲು ಪ್ರಯತ್ನ ನಡೆಸಿದ್ದರು. ಆಗ ಶೆಟ್ಟರ್ ಅವರು ನಮ್ಮ ಬೆನ್ನಿಗೆ ನಿಂತು ಕಾನೂನು ಹೋರಾಟ ಮಾಡಲು ಸಲಹೆ ನೀಡಿದ್ದರು’ ಎಂದರು.</p>.<p>‘ಆರಂಭಿಕ ಕಾನೂನು ಹೋರಾಟದಲ್ಲಿ ನಮಗೆ ಮೇಲುಗೈ ಆಗಿದ್ದರೂ, ಬೇರೆಬೇರೆ ರೀತಿಯಲ್ಲಿ ಪ್ರಕರಣಗಳು ಮುಂದುವರಿಯುತ್ತಲೇ ಇವೆ. ಈಗ ಬಡಾವಣೆ ಜಾಗದ ಮೂಲ ಮಾಲೀಕರು ಮತ್ತು ಖೊಟ್ಟಿ ದಾಖಲೆ ಸೃಷ್ಟಿಸಿದ ವ್ಯಕ್ತಿಗಳನ್ನು ಕೂರಿಸಿ ಶೆಟ್ಟರ್ ಅವರು ನಮ್ಮೊಂದಿಗೆ ರಾಜಿ ಮಾಡಿಸಿದ್ದಾರೆ’ ಎಂದು ತಿಳಿಸಿದರು.</p>.<p>‘ಶೆಟ್ಟರ್ ಅವರ ಪ್ರಯತ್ನದಿಂದಾಗಿ ಶಬರಿನಗರದಲ್ಲಿ ವಾಸ ಮಾಡುತ್ತಿದ್ದ 196 ಕುಟುಂಬಗಳು ಈಗ ಜಾಗದ ಮಾಲೀಕರಾಗಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮೋಹನ ಗುರುಸ್ವಾಮಿ ಭಾಗಿಯಾಗಲಿದ್ದಾರೆ’ ಎಂದರು.</p>.<p>ಎಸ್.ಎಸ್. ಪಾಷಾ, ಪರಶುರಾಮ ರಾಯಚೂರು, ಪ್ರಶಾಂತ ಭೂಷಣ್ಣವರ, ಖಲೀಲುಲ್ಲಾ ಪಾಷಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಶಬರಿನಗರದ ಜನರ ಜಾಗದ ಸಮಸ್ಯೆಗಳನ್ನು ಪರಿಹರಿಸಿಕೊಟ್ಟ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಮಾರ್ಚ್ 22ರಂದು ಸಂಜೆ 5 ಗಂಟೆಗೆ ಕುಸುಗಲ್ ರಸ್ತೆಯ ಶಬರಿನಗರದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಇಲ್ಲಿನ ಶಬರಿನಗರ ನಿವಾಸಿ ಶಂಕರಪ್ಪ ಸುಂಕದ ಹೇಳಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2014ರಲ್ಲಿ ವ್ಯಕ್ತಿಯೊಬ್ಬರು ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನಮ್ಮನ್ನು ಜಾಗ ಖಾಲಿ ಮಾಡಿಸಲು ಪ್ರಯತ್ನ ನಡೆಸಿದ್ದರು. ಆಗ ಶೆಟ್ಟರ್ ಅವರು ನಮ್ಮ ಬೆನ್ನಿಗೆ ನಿಂತು ಕಾನೂನು ಹೋರಾಟ ಮಾಡಲು ಸಲಹೆ ನೀಡಿದ್ದರು’ ಎಂದರು.</p>.<p>‘ಆರಂಭಿಕ ಕಾನೂನು ಹೋರಾಟದಲ್ಲಿ ನಮಗೆ ಮೇಲುಗೈ ಆಗಿದ್ದರೂ, ಬೇರೆಬೇರೆ ರೀತಿಯಲ್ಲಿ ಪ್ರಕರಣಗಳು ಮುಂದುವರಿಯುತ್ತಲೇ ಇವೆ. ಈಗ ಬಡಾವಣೆ ಜಾಗದ ಮೂಲ ಮಾಲೀಕರು ಮತ್ತು ಖೊಟ್ಟಿ ದಾಖಲೆ ಸೃಷ್ಟಿಸಿದ ವ್ಯಕ್ತಿಗಳನ್ನು ಕೂರಿಸಿ ಶೆಟ್ಟರ್ ಅವರು ನಮ್ಮೊಂದಿಗೆ ರಾಜಿ ಮಾಡಿಸಿದ್ದಾರೆ’ ಎಂದು ತಿಳಿಸಿದರು.</p>.<p>‘ಶೆಟ್ಟರ್ ಅವರ ಪ್ರಯತ್ನದಿಂದಾಗಿ ಶಬರಿನಗರದಲ್ಲಿ ವಾಸ ಮಾಡುತ್ತಿದ್ದ 196 ಕುಟುಂಬಗಳು ಈಗ ಜಾಗದ ಮಾಲೀಕರಾಗಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮೋಹನ ಗುರುಸ್ವಾಮಿ ಭಾಗಿಯಾಗಲಿದ್ದಾರೆ’ ಎಂದರು.</p>.<p>ಎಸ್.ಎಸ್. ಪಾಷಾ, ಪರಶುರಾಮ ರಾಯಚೂರು, ಪ್ರಶಾಂತ ಭೂಷಣ್ಣವರ, ಖಲೀಲುಲ್ಲಾ ಪಾಷಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>