<p><strong>ಧಾರವಾಡ</strong>: ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್ ಅನುಮತಿ ಮೇರೆಗೆ ಮಂಗಳವಾರ ಧಾರವಾಡಕ್ಕೆ ಪ್ರವೇಶಿಸಿ ಮತ ಚಲಾಯಿಸಿದರು. </p><p>ನಗರದ ಸಪ್ತಾಪುರದ ಶಾರದಾ ಪದವಿಪೂರ್ವ ವಿದ್ಯಾಲಯದ ಮತಗಟ್ಟೆ 75ರಲ್ಲಿ ಅವರು ಮತ ಚಲಾಯಿಸಿದರು. ಸಂಜೆ 5.40ರ ಹೊತ್ತಿಗೆ ಬಂದು ಮತ ಹಾಕಿದರು. ಮತ ಚಲಾಯಿಸಿದ ನಂತರ ವಾಪಸ್ ತೆರಳಿದರು. ಪತ್ನಿ ಶಿವಲೀಲಾ ಮತ್ತು ಪುತ್ರ ವೈಶಾಲಿ ಮತದಾನ ಕೇಂದ್ರಕ್ಕೆ ಬಂದಿದ್ಚರು. </p><p>ಶಾರದಾ ವಿದ್ಯಾಲಯದ ಮುಂಭಾಗದ ರಸ್ತೆಯಲ್ಲಿ ವಿನಯ ಕುಲಕರ್ಣಿ ಅಭಿಮಾನಿಗಳು ಜಮಾಯಿಸಿದ್ದರು. ಹಲವರು ವಿನಯ ಅವರಿಗೆ ಹೂವಿನ ಹಾರ ಹಾಕಿದರು. ಜೈಕಾರ ಕೂಗಿದರು. </p><p>ಶಾರದಾ ವಿದ್ಯಾಲಯದ ಆವರಣ ಪ್ರವೇಶ ದ್ವಾರದಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ಅಭಿಮಾನಿಗಳು ಮತದಾನ ಕೇಂದ್ರ ಆವರಣಕ್ಕೆ ಭಾಗಕ್ಕೆ ಪ್ರವೇಶಿಸದಂತೆ ಪೊಲಿಸರು ನಿಗಾ ವಹಿಸಿದ್ದರು. ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಸ್ಥಳದಲ್ಲಿಇದ್ದರು. </p><p>ಶಾಸಕ ವಿನಯ ಕುಲಕರ್ಣಿ ಅವರು ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದಾರೆ. ವಿನಯ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಇದೆ.</p>.<p><strong>‘ಮತದಾನಕ್ಕೆ ಅವಕಾಶ–ಸಂತಸ’</strong></p><p>‘ಹೈಕೋರ್ಟ್ ನನಗೆ ಮತದಾನದ ಹಕ್ಕು ಚಲಾಯಿಸಲು ಅವಕಾಶ ನೀಡಿದ್ದಕ್ಕೆ ಮತ್ತು ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಬಂದಿದ್ದು ಸಂತೋಷವಾಗಿದೆ’ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು. </p><p>ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘2023ರ ವಿಧಾನಸಭೆ ಚುನಾವಣೆಯಲ್ಲಿ ಧಾರವಾಡಕ್ಕೆ ಬಂದು ನನ್ನ ನಾಮಪತ್ರ ಸಲ್ಲಿಸಲೂ, ಮತ ಚಲಾಯಿಸಲು ಅವಕಾಶ ಸಿಕ್ಕಿರಲಿಲ್ಲ. ಈ ಚುನಾವಣೆಯಲ್ಲಿ ಮತ ಚಲಾವಣೆಗೆ ಅವಕಾಶ ಸಿಕ್ಕಿದೆ. 25 ವರ್ಷದಿಂದ ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ನಮ್ಮ ಭಾಗದ ಜನರು ನನ್ನ ಮೇಲೆ ವಿಶ್ವಾಸ ಇಟ್ಟಿದ್ಧಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. </p><p>‘ಕೋರ್ಟ್ ಯಾವುದೇ ಷರತ್ತು ವಿಧಿಸಿಲ್ಲ. ಮತ ಹಾಕಿ ವಾಪಸಾಗುವಂತೆ ಆದೇಶಿಸಿದೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್ ಅನುಮತಿ ಮೇರೆಗೆ ಮಂಗಳವಾರ ಧಾರವಾಡಕ್ಕೆ ಪ್ರವೇಶಿಸಿ ಮತ ಚಲಾಯಿಸಿದರು. </p><p>ನಗರದ ಸಪ್ತಾಪುರದ ಶಾರದಾ ಪದವಿಪೂರ್ವ ವಿದ್ಯಾಲಯದ ಮತಗಟ್ಟೆ 75ರಲ್ಲಿ ಅವರು ಮತ ಚಲಾಯಿಸಿದರು. ಸಂಜೆ 5.40ರ ಹೊತ್ತಿಗೆ ಬಂದು ಮತ ಹಾಕಿದರು. ಮತ ಚಲಾಯಿಸಿದ ನಂತರ ವಾಪಸ್ ತೆರಳಿದರು. ಪತ್ನಿ ಶಿವಲೀಲಾ ಮತ್ತು ಪುತ್ರ ವೈಶಾಲಿ ಮತದಾನ ಕೇಂದ್ರಕ್ಕೆ ಬಂದಿದ್ಚರು. </p><p>ಶಾರದಾ ವಿದ್ಯಾಲಯದ ಮುಂಭಾಗದ ರಸ್ತೆಯಲ್ಲಿ ವಿನಯ ಕುಲಕರ್ಣಿ ಅಭಿಮಾನಿಗಳು ಜಮಾಯಿಸಿದ್ದರು. ಹಲವರು ವಿನಯ ಅವರಿಗೆ ಹೂವಿನ ಹಾರ ಹಾಕಿದರು. ಜೈಕಾರ ಕೂಗಿದರು. </p><p>ಶಾರದಾ ವಿದ್ಯಾಲಯದ ಆವರಣ ಪ್ರವೇಶ ದ್ವಾರದಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ಅಭಿಮಾನಿಗಳು ಮತದಾನ ಕೇಂದ್ರ ಆವರಣಕ್ಕೆ ಭಾಗಕ್ಕೆ ಪ್ರವೇಶಿಸದಂತೆ ಪೊಲಿಸರು ನಿಗಾ ವಹಿಸಿದ್ದರು. ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಸ್ಥಳದಲ್ಲಿಇದ್ದರು. </p><p>ಶಾಸಕ ವಿನಯ ಕುಲಕರ್ಣಿ ಅವರು ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದಾರೆ. ವಿನಯ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಇದೆ.</p>.<p><strong>‘ಮತದಾನಕ್ಕೆ ಅವಕಾಶ–ಸಂತಸ’</strong></p><p>‘ಹೈಕೋರ್ಟ್ ನನಗೆ ಮತದಾನದ ಹಕ್ಕು ಚಲಾಯಿಸಲು ಅವಕಾಶ ನೀಡಿದ್ದಕ್ಕೆ ಮತ್ತು ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಬಂದಿದ್ದು ಸಂತೋಷವಾಗಿದೆ’ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು. </p><p>ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘2023ರ ವಿಧಾನಸಭೆ ಚುನಾವಣೆಯಲ್ಲಿ ಧಾರವಾಡಕ್ಕೆ ಬಂದು ನನ್ನ ನಾಮಪತ್ರ ಸಲ್ಲಿಸಲೂ, ಮತ ಚಲಾಯಿಸಲು ಅವಕಾಶ ಸಿಕ್ಕಿರಲಿಲ್ಲ. ಈ ಚುನಾವಣೆಯಲ್ಲಿ ಮತ ಚಲಾವಣೆಗೆ ಅವಕಾಶ ಸಿಕ್ಕಿದೆ. 25 ವರ್ಷದಿಂದ ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ನಮ್ಮ ಭಾಗದ ಜನರು ನನ್ನ ಮೇಲೆ ವಿಶ್ವಾಸ ಇಟ್ಟಿದ್ಧಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. </p><p>‘ಕೋರ್ಟ್ ಯಾವುದೇ ಷರತ್ತು ವಿಧಿಸಿಲ್ಲ. ಮತ ಹಾಕಿ ವಾಪಸಾಗುವಂತೆ ಆದೇಶಿಸಿದೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>