ಧಾರವಾಡ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಬರ್ಟ್ ದದ್ದಾಪುರಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಕಾಂಗ್ರೆಸ್ನ ಹುಬ್ಬಳ್ಳಿ-ಧಾರವಾಡ ಮಹಾನಗರ ಘಟಕದ ಕಾರ್ಯದರ್ಶಿ ಆನಂದ ಜಾಧವ ಆಗ್ರಹಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ತಿನ 11 ಸದಸ್ಯರ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ. ಜಗದೀಶ ಶೆಟ್ಟರ ಅವರ ರಾಜೀನಾಮೆಯಿಂದ ತರೆವಾಗಿರುವ ಸ್ಥಾನ ಭರ್ತಿಯಾಗಬೇಕಿದೆ. ಉತ್ತರ ಕರ್ನಾಟಕ ಭಾಗದ ಅಲ್ಪಸಂಖ್ಯಾತರ ಕೋಟಾದಲ್ಲಿ ದದ್ದಾಪುರಿ ಅವರನ್ನು ಪರಿಗಣಿಸಬೇಕು ಎಂದು ಕೋರಿದರು.
ಪ್ಯಾರಾಚೂಟ್ ನಾಯಕರಿಗೆ (ತಳಮಟ್ಟದಲ್ಲಿ ಕಾರ್ಯನಿರ್ವಹಿಸದವರು) ಆದ್ಯತೆ ನೀಡಬಾರದು. ಪರಿಷತ್ ಸ್ಥಾನವನ್ನು ಹಿಂದೆ ನೀಡಿದವರಿಗೆ ಪುನರಾವರ್ತನೆ ಮಾಡಬಾರದು ಎಂದು ಆಗ್ರಹಿಸಿದರು.