<p><strong>ಹುಬ್ಬಳ್ಳಿ:</strong> 'ಜನರ ಅಭಿಪ್ರಾಯಗಳನ್ನು ಪಡೆದು ಜವಾಬ್ದಾರಿಯಿಂದ ನಾವು ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಮತ್ತೊಮ್ಮೆ ಅದನ್ನು ಜನರ ಮುಂದಿಟ್ಟು ಚರ್ಚಿಸಲಾಗುವುದು' ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.</p><p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾವು ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ. ಆ ವಿಶ್ವಾಸದ ಮೇರೆಗೆ ಜವಾಬ್ದಾರಿಯಿಂದ ಎಲ್ಲ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಸಲಹೆ ಸೂಚನೆಗಳನ್ನು ಪಡೆದು ಪ್ರಣಾಳಿಕೆ ಸಿದ್ಧಪಡಿಸಿದ್ದೇವೆ. ಅದರಲ್ಲಿ ಏನೇನಿದೆ ಎಂದು ಜನರ ಮುಂದಿಟ್ಟು, ಚರ್ಚಿಸುತ್ತೇವೆ. ಕೆಲವರು ಬೇಜವಾಬ್ದಾರಿಯಿಂದ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ' ಎಂದು ಮೂದಲಿಸಿದರು.</p><p>'ಮೋದಿ ಗ್ಯಾರಂಟಿ ಮತ್ತು ಕಾಂಗ್ರೆಸ್ ಗ್ಯಾರಂಟಿ ಕುರಿತು ನಡೆಯುತ್ತಿರುವ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, 'ಮೋದಿ ಗ್ಯಾರಂಟಿ ಶಾಶ್ವತ ಗ್ಯಾರಂಟಿ, ದೇಶ ಕಟ್ಟುವ ಗ್ಯಾರಂಟಿ, ಬದುಕು ಕಟ್ಟುವ ಗ್ಯಾರಂಟಿ, ಸಾಮಾಜಿಕ ನ್ಯಾಯ ನೀಡುವ ಗ್ಯಾರಂಟಿ' ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> 'ಜನರ ಅಭಿಪ್ರಾಯಗಳನ್ನು ಪಡೆದು ಜವಾಬ್ದಾರಿಯಿಂದ ನಾವು ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಮತ್ತೊಮ್ಮೆ ಅದನ್ನು ಜನರ ಮುಂದಿಟ್ಟು ಚರ್ಚಿಸಲಾಗುವುದು' ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.</p><p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾವು ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ. ಆ ವಿಶ್ವಾಸದ ಮೇರೆಗೆ ಜವಾಬ್ದಾರಿಯಿಂದ ಎಲ್ಲ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಸಲಹೆ ಸೂಚನೆಗಳನ್ನು ಪಡೆದು ಪ್ರಣಾಳಿಕೆ ಸಿದ್ಧಪಡಿಸಿದ್ದೇವೆ. ಅದರಲ್ಲಿ ಏನೇನಿದೆ ಎಂದು ಜನರ ಮುಂದಿಟ್ಟು, ಚರ್ಚಿಸುತ್ತೇವೆ. ಕೆಲವರು ಬೇಜವಾಬ್ದಾರಿಯಿಂದ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ' ಎಂದು ಮೂದಲಿಸಿದರು.</p><p>'ಮೋದಿ ಗ್ಯಾರಂಟಿ ಮತ್ತು ಕಾಂಗ್ರೆಸ್ ಗ್ಯಾರಂಟಿ ಕುರಿತು ನಡೆಯುತ್ತಿರುವ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, 'ಮೋದಿ ಗ್ಯಾರಂಟಿ ಶಾಶ್ವತ ಗ್ಯಾರಂಟಿ, ದೇಶ ಕಟ್ಟುವ ಗ್ಯಾರಂಟಿ, ಬದುಕು ಕಟ್ಟುವ ಗ್ಯಾರಂಟಿ, ಸಾಮಾಜಿಕ ನ್ಯಾಯ ನೀಡುವ ಗ್ಯಾರಂಟಿ' ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>