ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು ರೈತರು ಮುಂಗಾರು ಹಂಗಾಮಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ರಸಗೊಬ್ಬರ ಖರೀದಿಗಾಗಿ ಕಾಟನ್ ಮಾರ್ಕೆಟ್ನಲ್ಲಿ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದ ಚಿತ್ರಣ ಕಂಡುಬಂತು. ಗೊಬ್ಬರ ತರಲು ಹುಬ್ಬಳ್ಳಿ ತಾಲ್ಲೂಕಿನ ಸುತ್ತಮುತ್ತಲ ಗ್ರಾಮಗಳಿಂದ ಬಂದಿದ್ದ ರೈತರು, ಆಸ್ಪತ್ರೆಗೆ ಹೋಗುವವರು, ಅಗತ್ಯ ಸೇವೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಮಳೆಯಲ್ಲಿ ತೋಯ್ದುಕೊಂಡೇ ಹೋದರು.