ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಡ ದುರಂತ: ಮೃತರ ಕುಟುಂಬಗಳಿಗೆ ₹2ಲಕ್ಷ, ಗಾಯಗೊಂಡವರಿಗೆ ₹1ಲಕ್ಷ

ಪಾಲಿಕೆ ವತಿಯಿಂದ ಪರಿಹಾರ
Last Updated 30 ಮಾರ್ಚ್ 2019, 10:52 IST
ಅಕ್ಷರ ಗಾತ್ರ

ಧಾರವಾಡ: ಇಲ್ಲಿನ ಕುಮಾರೇಶ್ವರ ನಗರದ ಬಹುಮಹಡಿ ಕಟ್ಟಡ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಇನ್ನು ₹2ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ತಲಾ ₹1ಲಕ್ಷ ಪರಿಹಾರವು ನಗರಾಭಿವೃದ್ಧಿ ಇಲಾಖೆಯಿಂದ ಸಿಗಲಿದೆ.

ಈ ಕುರಿತಂತೆ ಜಿಲ್ಲಾಧಿಕಾರಿಗೆ ಪತ್ರ ಕಳುಹಿಸಿರುವ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ‘ಮಾರ್ಚ್‌ 19ರಂದು ಸಂಭವಿಸಿದ ಕಟ್ಟಡ ದುರಂತದಲ್ಲಿ ಮೃತಪಟ್ಟ 19 ಕುಟುಂಬಗಳಿಗೆ ಮಹಾನಗರ ಪಾಲಿಕೆಯು ತಲಾ ₹2ಲಕ್ಷ ಪರಿಹಾರ ನೀಡಲಿದೆ. ಜತೆಗೆ ಗಂಭೀರವಾಗಿ ಗಾಯಗೊಂಡ 17 ಜನರಿಗೆ ತಲಾ ₹1ಲಕ್ಷದಂತೆ ಪರಿಹಾರ ನೀಡಬೇಕು’ ಎಂದು ಆದೇಶಿಸಿದ್ದಾರೆ.

‘ಇದಕ್ಕೆ ತಗಲುವ ವೆಚ್ಚವನ್ನು ಪಾಲಿಕೆಯು ಸಾಮಾನ್ಯ ನಿಧಿಯಿಂದ ಭರಿಸಬೇಕು. ಈ ಮೊತ್ತವನ್ನು ಸಂಬಂಧಪಟ್ಟ ಜಾಗದ ಮಾಲೀಕರ ಆಸ್ತಿ ಕರದಲ್ಲಿ ಬಾಕಿ ಇರಿಸಿ ವಸೂಲಿ ಮಾಡಲು ಸರ್ಕಾರ ಸೂಚಿಸಿದೆ’ ಎಂದೂ ತಿಳಿಸಿದ್ದಾರೆ.

ಈಗಾಗಲೇ ಜಿಲ್ಲಾಡಳಿತ ತಾತ್ಕಾಲಿಕ ಪರಿಹಾರವಾಗಿ ಮೃತ ಕುಟುಂಬಗಳಿಗೆ ತಲಾ ₹2ಲಕ್ಷ ಪರಿಹಾರ ನೀಡಿತ್ತು. ದುರಂತದಲ್ಲಿ ಒಟ್ಟು 59 ಜನ ಗಾಯಗೊಂಡಿದ್ದರು. ಇವರಲ್ಲಿ ಶಸ್ತ್ರಚಿಕಿತ್ಸೆ, ಮೂಳೆಮುರಿತದೊಂದಿಗೆ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಈ ಮೊದಲು ಪರಹಾರ ಘೋಷಿಸಿರಲಿಲ್ಲ. ಈಗ ಪಾಲಿಕೆವತಿಯಿಂದ ಅವರಿಗೂ ಪರಿಹಾರ ಸಿಗುತ್ತಿರುವುದು ಆ ಕುಟುಂಬಗಳಿಗೆ ನೆಮ್ಮದಿ ತಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT