<p><strong>ಹುಬ್ಬಳ್ಳಿ</strong>: ‘ಉತ್ತರ ಕರ್ನಾಟಕದಿಂದ ಆಹಾರ, ಪಾನೀಯ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ರಫ್ತು ಮಾಡಲು ಮೊರ್ಮುಗಾವ್ ಬಂದರು ಪುನರ್ ಆರಂಭವಾಗಿದ್ದು, ಇದು ಕಂಟೈನರ್ ಸಾಗಣೆಗೆ ಅನುಕೂಲವಾಗಲಿದೆ’ ಎಂದು ಮೊರ್ಮುಗಾವ್ ಬಂದರು ಪ್ರಾಧಿಕಾರದ ಅಧ್ಯಕ್ಷ ಎನ್.ವಿನೋದಕುಮಾರ್ ಹೇಳಿದರು. </p>.<p>ನಗರದಲ್ಲಿ ಗುರುವಾರ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಆಯೋಜಿಸಿದ್ದ ‘ವ್ಯಾಪಾರ ಉತ್ತೇಜನ ಸಭೆ’ಯನ್ನು ಉದ್ಘಾಟಿಸಿ, ಮಾತನಾಡಿದರು. </p>.<p>‘ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಬಂದರಿನಲ್ಲಿ ಕಂಟೈನರ್ ಸಾಗಣೆ ಸ್ಥಗಿತಗೊಂಡಿತ್ತು. ಇದೀಗ ಪುನಃ ಆರಂಭಿಸಲಾಗಿದೆ. ವ್ಯಾಪಾರ ಚಟುವಟಿಕೆಗಳನ್ನು ಸುಧಾರಿಸಲು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಸಾರ್ವಜನಿಕ–ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಖಾಸಗಿ ಸಂಸ್ಥೆಗಳೊಂದಿಗೆ ಕೈಜೋಡಿಸಿ ಬಂದರು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ‘ ಎಂದು ಹೇಳಿದರು.</p>.<p>‘ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಿದ್ದು, ಇದರಿಂದಾಗಿ ರಫ್ತು ಪ್ರಕ್ರಿಯೆಯೂ ಹೆಚ್ಚಾಗಿದೆ. ನಮ್ಮ ಬಂದರಿನಿಂದ ಕಬ್ಬಿಣದ ಅದಿರು ರಫ್ತಾಗುತ್ತಿದೆ. ಇದಲ್ಲದೇ ವರ್ಷಕ್ಕೆ ಸುಮಾರು 1 ಲಕ್ಷ ವ್ಯಾಪಾರಿಗಳು ತಮ್ಮ ವ್ಯಾಪಾರು ವಹಿವಾಟಿಗೆ ಈ ಬಂದರಿನ ಸೇವೆ ಬಳಸಿಕೊಳ್ಳುತ್ತಿದ್ದಾರೆ’ ಎಂದರು. </p>.<p>‘ಉದ್ದಿಮೆ, ವ್ಯಾಪಾರಿಗಳಿಗೆ ಅಗತ್ಯ ಸೇವೆ, ಸೌಲಭ್ಯ ನೀಡಲು ನಾವು ಸಿದ್ಧರಿದ್ದು, ಆಮದು– ರಫ್ತು ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುತ್ತದೆ’ ಎಂದರು. </p>.<p>ವಿಟಿಪಿಸಿ ವ್ಯವಸ್ಥಾಪಕ ನಿರ್ದೇಶಕ ಬಿ.ಕೆ.ಶಿವಕುಮಾರ ಅವರು, ‘ರಫ್ತು ಚಟುವಟಿಕೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಆರ್ಥಿಕ ನೆರವು ಹಾಗೂ ತರಬೇತಿ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಬೆಂಬಲ ನೀಡುತ್ತಿವೆ. ರಫ್ತುಗಾರರು ಈ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಮಾರುಕಟ್ಟೆಯನ್ನು ವಿಸ್ತರಿಸಿಕೊಳ್ಳಬೇಕು‘ ಎಂದರು. </p>.<p>‘ದೇಶದ ಒಟ್ಟು ರಫ್ತಿನಲ್ಲಿ ಕರ್ನಾಟಕದ ಪಾಲು ಶೇ 41ರಷ್ಟಿದೆ. ಇದರಲ್ಲಿ ಶೇ 35ರಷ್ಟು ಸೇವಾ ವಲಯದ ರಫ್ತು ಆಗಿದೆ. ಮುಂದಿನ 10 ವರ್ಷಗಳಲ್ಲಿ ಸರಕು ರಫ್ತನ್ನು ಶೇ 15ಕ್ಕೆ ಹೆಚ್ಚಿಸುವ ಗುರಿಯಿದೆ’ ಎಂದು ಹೇಳಿದರು.</p>.<p>ಕೆಸಿಸಿಐ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ್, ಗೌರವ ಕಾರ್ಯದರ್ಶಿ ಉದಯ ರೇವಣ್ಣಕರ, ಪ್ರಮುಖರಾದ ಉಮೇಶ್ ವಿ., ವಿವೇಕ್ ನಾಯಕ್, ವೀರಣ್ಣ ಹವಲ್ದಾರ್, ಬೃಂದಾ ಅಮ್ಮಣವರ ಸೇರಿದಂತೆ ರಫ್ತುದಾರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಉತ್ತರ ಕರ್ನಾಟಕದಿಂದ ಆಹಾರ, ಪಾನೀಯ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ರಫ್ತು ಮಾಡಲು ಮೊರ್ಮುಗಾವ್ ಬಂದರು ಪುನರ್ ಆರಂಭವಾಗಿದ್ದು, ಇದು ಕಂಟೈನರ್ ಸಾಗಣೆಗೆ ಅನುಕೂಲವಾಗಲಿದೆ’ ಎಂದು ಮೊರ್ಮುಗಾವ್ ಬಂದರು ಪ್ರಾಧಿಕಾರದ ಅಧ್ಯಕ್ಷ ಎನ್.ವಿನೋದಕುಮಾರ್ ಹೇಳಿದರು. </p>.<p>ನಗರದಲ್ಲಿ ಗುರುವಾರ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಆಯೋಜಿಸಿದ್ದ ‘ವ್ಯಾಪಾರ ಉತ್ತೇಜನ ಸಭೆ’ಯನ್ನು ಉದ್ಘಾಟಿಸಿ, ಮಾತನಾಡಿದರು. </p>.<p>‘ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಬಂದರಿನಲ್ಲಿ ಕಂಟೈನರ್ ಸಾಗಣೆ ಸ್ಥಗಿತಗೊಂಡಿತ್ತು. ಇದೀಗ ಪುನಃ ಆರಂಭಿಸಲಾಗಿದೆ. ವ್ಯಾಪಾರ ಚಟುವಟಿಕೆಗಳನ್ನು ಸುಧಾರಿಸಲು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಸಾರ್ವಜನಿಕ–ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಖಾಸಗಿ ಸಂಸ್ಥೆಗಳೊಂದಿಗೆ ಕೈಜೋಡಿಸಿ ಬಂದರು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ‘ ಎಂದು ಹೇಳಿದರು.</p>.<p>‘ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಿದ್ದು, ಇದರಿಂದಾಗಿ ರಫ್ತು ಪ್ರಕ್ರಿಯೆಯೂ ಹೆಚ್ಚಾಗಿದೆ. ನಮ್ಮ ಬಂದರಿನಿಂದ ಕಬ್ಬಿಣದ ಅದಿರು ರಫ್ತಾಗುತ್ತಿದೆ. ಇದಲ್ಲದೇ ವರ್ಷಕ್ಕೆ ಸುಮಾರು 1 ಲಕ್ಷ ವ್ಯಾಪಾರಿಗಳು ತಮ್ಮ ವ್ಯಾಪಾರು ವಹಿವಾಟಿಗೆ ಈ ಬಂದರಿನ ಸೇವೆ ಬಳಸಿಕೊಳ್ಳುತ್ತಿದ್ದಾರೆ’ ಎಂದರು. </p>.<p>‘ಉದ್ದಿಮೆ, ವ್ಯಾಪಾರಿಗಳಿಗೆ ಅಗತ್ಯ ಸೇವೆ, ಸೌಲಭ್ಯ ನೀಡಲು ನಾವು ಸಿದ್ಧರಿದ್ದು, ಆಮದು– ರಫ್ತು ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುತ್ತದೆ’ ಎಂದರು. </p>.<p>ವಿಟಿಪಿಸಿ ವ್ಯವಸ್ಥಾಪಕ ನಿರ್ದೇಶಕ ಬಿ.ಕೆ.ಶಿವಕುಮಾರ ಅವರು, ‘ರಫ್ತು ಚಟುವಟಿಕೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಆರ್ಥಿಕ ನೆರವು ಹಾಗೂ ತರಬೇತಿ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಬೆಂಬಲ ನೀಡುತ್ತಿವೆ. ರಫ್ತುಗಾರರು ಈ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಮಾರುಕಟ್ಟೆಯನ್ನು ವಿಸ್ತರಿಸಿಕೊಳ್ಳಬೇಕು‘ ಎಂದರು. </p>.<p>‘ದೇಶದ ಒಟ್ಟು ರಫ್ತಿನಲ್ಲಿ ಕರ್ನಾಟಕದ ಪಾಲು ಶೇ 41ರಷ್ಟಿದೆ. ಇದರಲ್ಲಿ ಶೇ 35ರಷ್ಟು ಸೇವಾ ವಲಯದ ರಫ್ತು ಆಗಿದೆ. ಮುಂದಿನ 10 ವರ್ಷಗಳಲ್ಲಿ ಸರಕು ರಫ್ತನ್ನು ಶೇ 15ಕ್ಕೆ ಹೆಚ್ಚಿಸುವ ಗುರಿಯಿದೆ’ ಎಂದು ಹೇಳಿದರು.</p>.<p>ಕೆಸಿಸಿಐ ಅಧ್ಯಕ್ಷ ಜಿ.ಕೆ.ಆದಪ್ಪಗೌಡರ್, ಗೌರವ ಕಾರ್ಯದರ್ಶಿ ಉದಯ ರೇವಣ್ಣಕರ, ಪ್ರಮುಖರಾದ ಉಮೇಶ್ ವಿ., ವಿವೇಕ್ ನಾಯಕ್, ವೀರಣ್ಣ ಹವಲ್ದಾರ್, ಬೃಂದಾ ಅಮ್ಮಣವರ ಸೇರಿದಂತೆ ರಫ್ತುದಾರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>