‘ಒಂದು ತಿಂಗಳಿನಿಂದ ಪತಿಯ ಪರ ಪ್ರಚಾರ ನಡೆಸುತ್ತಿದ್ದೇನೆ. ಹುಬ್ಬಳ್ಳಿ, ಧಾರವಾಡ, ಕುಂದಗೋಳದಲ್ಲಿ ಪ್ರಚಾರ ಮಾಡಿದ್ದೇನೆ. ಜೋಶಿ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ ನೀವು ಬರದಿದ್ದರೂ ಗೆಲ್ಲುತ್ತಾರೆ ಎಂದು ಹೆಚ್ಚಿನ ಜನರು ಹೇಳುತ್ತಾರೆ. ರಸ್ತೆ ರಿಪೇರಿ ಆಗಿಲ್ಲ, ಕುಡಿಯುವ ನೀರಿನ ಸಮಸ್ಯೆ ಇದೆ, ಬೀದಿ ದೀಪ ಇಲ್ಲ ಎಂದು ದೂರಿದವರೂ ಇದ್ದಾರೆ’ ಎಂದು ‘ಪ್ರಜಾವಾಣಿ’ಗೆ ಪ್ರಚಾರದ ಅನುಭವಗಳನ್ನು ವಿವರಿಸಿದರು.