ಕೇಂದ್ರದ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು (ಎಂಎಸ್ಪಿಐ) 2016ರಲ್ಲಿ ಹೊರಡಿಸಿದ ಮಾರ್ಗಸೂಚಿಯಲ್ಲಿ
ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಸಮುದಾಯಗಳಿಗೆ ಅಗತ್ಯವಿರುವ ಕಾಮಗಾರಿಗಳಿಗೆ ಪ್ರತಿ ವರ್ಷ ₹5 ಕೋಟಿ ಬಳಕೆ ಮಾಡಿಕೊಳ್ಳಲು ಅವಕಾಶ ನೀಡಿದೆ. ಸ್ವಚ್ಛ ಭಾರತ ಯೋಜನೆಯ ಧ್ಯೇಯೋದ್ದೇಶ, ಶಾಲೆ ಮತ್ತು ಸಾರ್ವಜನಿಕ ಶೌಚಾಲಯ ನಿರ್ಮಾಣ, ಮಳೆನೀರು ಸಂಗ್ರಹ ವ್ಯವಸ್ಥೆ, ಕೌಶಲ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆಗೆ ಹೆಚ್ಚು ಒತ್ತು ನೀಡಲು ಸೂಚಿಸಿದೆ. ಆದರೆ, ಹೆಚ್ಚಿನ ಸಂಸದರು ಸಮುದಾಯ ಭವನಗಳನ್ನು ನಿರ್ಮಿಸುತ್ತಿದ್ದಾರೆ.