<p><strong>ಹುಬ್ಬಳ್ಳಿ: ‘</strong>ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್ಎಂಇ) ಪ್ರಗತಿಗೆ ಸರ್ಕಾರದಿಂದ ಹಲವು ಯೋಜನೆಗಳ ಮೂಲಕ ಆರ್ಥಿಕ ನೆರವು ಹಾಗೂ ಸೌಲಭ್ಯಗಳು ದೊರೆಯುತ್ತಿದ್ದು, ಕೈಗಾರಿಕೋದ್ಯಮಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಧಾರವಾಡ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಪುತ್ರಪ್ಪ ಆರ್.ಎಚ್. ಹೇಳಿದರು. </p>.<p>ನಗರದಲ್ಲಿ ಶುಕ್ರವಾರ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಉತ್ತರ ಕರ್ನಾಟಕ ಸಣ್ಣ ಕೈಗಾರಿಕಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ರಫ್ತು ಪ್ರೋತ್ಸಾಹ ಮತ್ತು ಅನುಕೂಲತೆ (ಟಿಆರ್ಇಡಿಎಸ್) ಯೋಜನೆಯ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. </p>.<p>‘ಎಂಎಸ್ಎಂಇ ಉದ್ದಿಮೆದಾರರು ವ್ಯಾಪಾರಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೋಂದಾಯಿಸಲು ಟಿಆರ್ಇಡಿಎಸ್ ಎಲೆಕ್ಟ್ರಾನಿಕ್ ವೇದಿಕೆ ಉತ್ತಮವಾಗಿದ್ದು, ಇದರಿಂದ ಉದ್ದಿಮೆದಾರರಿಗೆ ನಗದು ಹರಿವು ಸುಧಾರಿಸುತ್ತದೆ. ಕೈಗಾರಿಕೋದ್ಯಮಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು. </p>.<p>ಸಂಪನ್ಮೂಲ ವ್ಯಕ್ತಿ ಎಸ್.ಎಸ್.ಮೂರ್ತಿ ಅವರು, ‘ಟಿಆರ್ಇಡಿಎಸ್ ವ್ಯವಸ್ಥೆಯನ್ನು ಕೇಂದ್ರ ಸರ್ಕಾರವು 2017ರಲ್ಲಿಯೇ ಅನುಷ್ಠಾನಕ್ಕೆ ತಂದಿದೆ. ₹250 ಕೋಟಿಗೂ ಅಧಿಕ ವಾರ್ಷಿಕ ವಹಿವಾಟು ಮಾಡುವ ಕಂಪನಿಗಳು ಸರ್ಕಾರಕ್ಕೆ ಸರಕು ಮತ್ತು ಸೇವೆ ನೀಡಿದ್ದಲ್ಲಿ ನಿಗದಿತ ಅವಧಿಯೊಳಗೆ ಈ ವೇದಿಕೆಯ ಮೂಲಕ ಹಣ ಪಡೆದುಕೊಳ್ಳುವ ಸೌಲಭ್ಯವಿರುತ್ತದೆ’ ಎಂದರು.</p>.<p>‘ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮಾಲೀಕರು ಹಾಗೂ ಕೈಗಾರಿಕೋದ್ಯಮಿಗಳು ಈ ವೇದಿಕೆಯಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಎಲ್ಲಾ ಬ್ಯಾಂಕ್ಗಳು ಟಿಆರ್ಇಡಿಎಸ್ ಸೇವೆ ನೀಡುವಂತೆ ಆರ್ಬಿಐ ಸೂಚಿಸಿರುತ್ತದೆ‘ ಎಂದು ಹೇಳಿದರು. </p>.<p>ಎಚ್ಇಎಫ್ ಅಧ್ಯಕ್ಷ ವಿಜೇಶ್ ಸೈಗಲ್ ಅವರು, ‘ಉದ್ಯಮ ನಡೆಸಲು ಹಣಕಾಸಿನ ಅರಿವು ತುಂಬಾ ಅವಶ್ಯ. ಕೈಗಾರಿಕೋದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳು ಕೋವಿಡ್ ನಂತರದ ದಿನಗಳಲ್ಲಿ ಸಾಕಷ್ಟು ಸವಾಲು ಎದುರಿಸಿದ್ದವು. ಸಕಾಲಕ್ಕೆ ಹಣಕಾಸಿನ ನೆರವು ದೊರೆಯಲಿಲ್ಲ ಎಂದರೆ ಉದ್ಯಮ ನಡೆಸುವುದು ಕಷ್ಟ’ ಎಂದರು. </p>.<p>ಟಾಟಾ ಪವರ್ ಸೋಲಾರ್ನ ಪ್ರದೀಪ್ ಶೆಟ್ಟರ್ ಅವರು, ಸೋಲಾರ್ ಪವರ್ ಬಗ್ಗೆ ಮಾಹಿತಿ ನೀಡಿದರು. </p>.<p>ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರಮೇಶ ಪಾಟೀಲ್, ಸಣ್ಣ ಕೈಗಾರಿಕೆಗಳ ಸಂಘದ ಎಂ.ಟಿ.ಸಾಗರ, ಸುಧಾ ಜೆ.ಪವಾರ, ಶಿವಾನಂದ ಕಮ್ಮಾರ ಹಾಗೂ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಜಿಲ್ಲೆಯ ಕೈಗಾರಿಕೋದ್ಯಮಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: ‘</strong>ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್ಎಂಇ) ಪ್ರಗತಿಗೆ ಸರ್ಕಾರದಿಂದ ಹಲವು ಯೋಜನೆಗಳ ಮೂಲಕ ಆರ್ಥಿಕ ನೆರವು ಹಾಗೂ ಸೌಲಭ್ಯಗಳು ದೊರೆಯುತ್ತಿದ್ದು, ಕೈಗಾರಿಕೋದ್ಯಮಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಧಾರವಾಡ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಪುತ್ರಪ್ಪ ಆರ್.ಎಚ್. ಹೇಳಿದರು. </p>.<p>ನಗರದಲ್ಲಿ ಶುಕ್ರವಾರ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಉತ್ತರ ಕರ್ನಾಟಕ ಸಣ್ಣ ಕೈಗಾರಿಕಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ರಫ್ತು ಪ್ರೋತ್ಸಾಹ ಮತ್ತು ಅನುಕೂಲತೆ (ಟಿಆರ್ಇಡಿಎಸ್) ಯೋಜನೆಯ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. </p>.<p>‘ಎಂಎಸ್ಎಂಇ ಉದ್ದಿಮೆದಾರರು ವ್ಯಾಪಾರಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೋಂದಾಯಿಸಲು ಟಿಆರ್ಇಡಿಎಸ್ ಎಲೆಕ್ಟ್ರಾನಿಕ್ ವೇದಿಕೆ ಉತ್ತಮವಾಗಿದ್ದು, ಇದರಿಂದ ಉದ್ದಿಮೆದಾರರಿಗೆ ನಗದು ಹರಿವು ಸುಧಾರಿಸುತ್ತದೆ. ಕೈಗಾರಿಕೋದ್ಯಮಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು. </p>.<p>ಸಂಪನ್ಮೂಲ ವ್ಯಕ್ತಿ ಎಸ್.ಎಸ್.ಮೂರ್ತಿ ಅವರು, ‘ಟಿಆರ್ಇಡಿಎಸ್ ವ್ಯವಸ್ಥೆಯನ್ನು ಕೇಂದ್ರ ಸರ್ಕಾರವು 2017ರಲ್ಲಿಯೇ ಅನುಷ್ಠಾನಕ್ಕೆ ತಂದಿದೆ. ₹250 ಕೋಟಿಗೂ ಅಧಿಕ ವಾರ್ಷಿಕ ವಹಿವಾಟು ಮಾಡುವ ಕಂಪನಿಗಳು ಸರ್ಕಾರಕ್ಕೆ ಸರಕು ಮತ್ತು ಸೇವೆ ನೀಡಿದ್ದಲ್ಲಿ ನಿಗದಿತ ಅವಧಿಯೊಳಗೆ ಈ ವೇದಿಕೆಯ ಮೂಲಕ ಹಣ ಪಡೆದುಕೊಳ್ಳುವ ಸೌಲಭ್ಯವಿರುತ್ತದೆ’ ಎಂದರು.</p>.<p>‘ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮಾಲೀಕರು ಹಾಗೂ ಕೈಗಾರಿಕೋದ್ಯಮಿಗಳು ಈ ವೇದಿಕೆಯಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಎಲ್ಲಾ ಬ್ಯಾಂಕ್ಗಳು ಟಿಆರ್ಇಡಿಎಸ್ ಸೇವೆ ನೀಡುವಂತೆ ಆರ್ಬಿಐ ಸೂಚಿಸಿರುತ್ತದೆ‘ ಎಂದು ಹೇಳಿದರು. </p>.<p>ಎಚ್ಇಎಫ್ ಅಧ್ಯಕ್ಷ ವಿಜೇಶ್ ಸೈಗಲ್ ಅವರು, ‘ಉದ್ಯಮ ನಡೆಸಲು ಹಣಕಾಸಿನ ಅರಿವು ತುಂಬಾ ಅವಶ್ಯ. ಕೈಗಾರಿಕೋದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳು ಕೋವಿಡ್ ನಂತರದ ದಿನಗಳಲ್ಲಿ ಸಾಕಷ್ಟು ಸವಾಲು ಎದುರಿಸಿದ್ದವು. ಸಕಾಲಕ್ಕೆ ಹಣಕಾಸಿನ ನೆರವು ದೊರೆಯಲಿಲ್ಲ ಎಂದರೆ ಉದ್ಯಮ ನಡೆಸುವುದು ಕಷ್ಟ’ ಎಂದರು. </p>.<p>ಟಾಟಾ ಪವರ್ ಸೋಲಾರ್ನ ಪ್ರದೀಪ್ ಶೆಟ್ಟರ್ ಅವರು, ಸೋಲಾರ್ ಪವರ್ ಬಗ್ಗೆ ಮಾಹಿತಿ ನೀಡಿದರು. </p>.<p>ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರಮೇಶ ಪಾಟೀಲ್, ಸಣ್ಣ ಕೈಗಾರಿಕೆಗಳ ಸಂಘದ ಎಂ.ಟಿ.ಸಾಗರ, ಸುಧಾ ಜೆ.ಪವಾರ, ಶಿವಾನಂದ ಕಮ್ಮಾರ ಹಾಗೂ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಜಿಲ್ಲೆಯ ಕೈಗಾರಿಕೋದ್ಯಮಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>