<p><strong>ಧಾರವಾಡ: </strong>ಕಲಘಟಗಿ ರಸ್ತೆಯ ಮಾಡರ್ನ್ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆ ಆವರಣದಲ್ಲಿ ತಂದು ಸುರಿಯಲಾಗಿದ್ದ ಮಣ್ಣು, ಕಬ್ಬಿಣ, ಪೈಪ್ಗಳ ತೆರವು ಕಾರ್ಯಾಚರಣೆ ಬುಧವಾರದಿಂದ ಆರಂಭವಾಗಿದೆ.</p>.<p>ವಿವಾದದಲ್ಲಿರುವ ಸರ್ಕಾರಿ ಶಾಲೆ ಆವರಣಕ್ಕೆ ಕಾಂಪೌಂಡ್ ಇಲ್ಲದ ಕಾರಣ, ಕಟ್ಟಡ ಸಾಮಗ್ರಿ ಹಾಗೂ ಜಲಮಂಡಳಿಗೆ ಸೇರಿ ಪೈಪ್ಗಳನ್ನು ತಂದು ಇಲ್ಲಿ ಹಾಕಲಾಗಿತ್ತು. ಈ ಕುರಿತು ಜುಲೈ 8ರಂದು ‘ಪ್ರಜಾವಾಣಿ’ ಪತ್ರಿಕೆಯು ‘ಸರ್ಕಾರಿ ಶಾಲೆ ಆವರಣದಲ್ಲಿ ಮಣ್ಣು, ಕಬ್ಬಿಣ, ಪೈಪು’ ಶೀರ್ಷಿಕೆ ಅಡಿ ವಿಶೇಷ ವರದಿ ಪ್ರಕಟಿಸಿತ್ತು.</p>.<p>ವರದಿಗೆ ಎಚ್ಚೆತ್ತುಕೊಂಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಅನುಮತಿ ಇಲ್ಲದೆ ಹಾಕಲಾಗಿದ್ದ ಮಣ್ಣು, ಕಬ್ಬಿಣ ಹಾಗೂ ಪೈಪ್ಗಳನ್ನು ತೆರವುಗೊಳಿಸಲು ಕ್ರಮ ಕೈಗೊಂಡಿತು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ, ‘ಶಾಲೆಗೆ ಸೇರಿದ ಜಾಗ ಸದ್ಯ ವಿವಾದದಲ್ಲಿದೆ. ಈ ಜಾಗದಲ್ಲಿ ಹಾಕಲಾಗಿದ್ದ ವಸ್ತುಗಳನ್ನು ತೆರವುಗೊಳಿಸುವಂತೆ ಮಣ್ಣು ಹಾಕಿದ ನಿವೇಶನದ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಹಾಗೆಯೇ ಪೈಪ್ಗಳನ್ನು ಸ್ಥಳಾಂತರಿಸುವಂತೆ ಜಲಮಂಡಳಿಗೂ ಪತ್ರ ಬರೆಯಲಾಗಿತ್ತು. ಅದರಂತೆ ತೆರವು ಕಾರ್ಯಾಚರಣೆ ನಡೆಯುತ್ತಿದೆ’ ಎಂದರು.</p>.<p>‘ವಿವಾದದಲ್ಲಿರುವ ಈ ಜಾಗದ ಕುರಿತು ಶೀಘ್ರದಲ್ಲಿ ವಕೀಲರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ವರದಿ ಸಲ್ಲಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ಕಲಘಟಗಿ ರಸ್ತೆಯ ಮಾಡರ್ನ್ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆ ಆವರಣದಲ್ಲಿ ತಂದು ಸುರಿಯಲಾಗಿದ್ದ ಮಣ್ಣು, ಕಬ್ಬಿಣ, ಪೈಪ್ಗಳ ತೆರವು ಕಾರ್ಯಾಚರಣೆ ಬುಧವಾರದಿಂದ ಆರಂಭವಾಗಿದೆ.</p>.<p>ವಿವಾದದಲ್ಲಿರುವ ಸರ್ಕಾರಿ ಶಾಲೆ ಆವರಣಕ್ಕೆ ಕಾಂಪೌಂಡ್ ಇಲ್ಲದ ಕಾರಣ, ಕಟ್ಟಡ ಸಾಮಗ್ರಿ ಹಾಗೂ ಜಲಮಂಡಳಿಗೆ ಸೇರಿ ಪೈಪ್ಗಳನ್ನು ತಂದು ಇಲ್ಲಿ ಹಾಕಲಾಗಿತ್ತು. ಈ ಕುರಿತು ಜುಲೈ 8ರಂದು ‘ಪ್ರಜಾವಾಣಿ’ ಪತ್ರಿಕೆಯು ‘ಸರ್ಕಾರಿ ಶಾಲೆ ಆವರಣದಲ್ಲಿ ಮಣ್ಣು, ಕಬ್ಬಿಣ, ಪೈಪು’ ಶೀರ್ಷಿಕೆ ಅಡಿ ವಿಶೇಷ ವರದಿ ಪ್ರಕಟಿಸಿತ್ತು.</p>.<p>ವರದಿಗೆ ಎಚ್ಚೆತ್ತುಕೊಂಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಅನುಮತಿ ಇಲ್ಲದೆ ಹಾಕಲಾಗಿದ್ದ ಮಣ್ಣು, ಕಬ್ಬಿಣ ಹಾಗೂ ಪೈಪ್ಗಳನ್ನು ತೆರವುಗೊಳಿಸಲು ಕ್ರಮ ಕೈಗೊಂಡಿತು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ, ‘ಶಾಲೆಗೆ ಸೇರಿದ ಜಾಗ ಸದ್ಯ ವಿವಾದದಲ್ಲಿದೆ. ಈ ಜಾಗದಲ್ಲಿ ಹಾಕಲಾಗಿದ್ದ ವಸ್ತುಗಳನ್ನು ತೆರವುಗೊಳಿಸುವಂತೆ ಮಣ್ಣು ಹಾಕಿದ ನಿವೇಶನದ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಹಾಗೆಯೇ ಪೈಪ್ಗಳನ್ನು ಸ್ಥಳಾಂತರಿಸುವಂತೆ ಜಲಮಂಡಳಿಗೂ ಪತ್ರ ಬರೆಯಲಾಗಿತ್ತು. ಅದರಂತೆ ತೆರವು ಕಾರ್ಯಾಚರಣೆ ನಡೆಯುತ್ತಿದೆ’ ಎಂದರು.</p>.<p>‘ವಿವಾದದಲ್ಲಿರುವ ಈ ಜಾಗದ ಕುರಿತು ಶೀಘ್ರದಲ್ಲಿ ವಕೀಲರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ವರದಿ ಸಲ್ಲಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>