<p><strong>ಹುಬ್ಬಳ್ಳಿ:</strong> ‘ಜಾತ್ಯತೀತ, ಸಮಾಜವಾದದ ಸೋಗು ಹಾಕಿರುವ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಆಗ್ರಹಿಸಿದರು.</p>.<p>ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಹೆಸರು ಮುಂಚೂಣಿಗೆ ಬಂದಿದೆ. ಈ ಹಗರಣವನ್ನು ಸಿಬಿಐಯಿಂದ ಪೂರ್ಣಪ್ರಮಾಣದಲ್ಲಿ ತನಿಖೆ ನಡೆಸಬೇಕು’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಹಗರಣದ ಕುರಿತು ಪೂರ್ಣಪ್ರಮಾಣದ ತನಿಖೆ ನಡೆಸುವಂತೆ ಒತ್ತಾಯಿಸಿ ಜುಲೈ 10ರಂದು ಮುಡಾ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ಮುಖ್ಯಮಂತ್ರಿಯವರ ರಾಜೀನಾಮೆಗೆ ಒತ್ತಾಯಿಸಲಾಗುವುದು’ ಎಂದರು.</p>.<p>‘ಮುಡಾದಿಂದ 10 ವರ್ಷಗಳ ಅವಧಿಯಲ್ಲಿ ಪಡೆದಿರುವ ನಿವೇಶನಗಳನ್ನು ರದ್ದುಗೊಳಿಸಬೇಕು. ಅರ್ಹರಿಗೆ ನೀಡಬೇಕು. ಭ್ರಷ್ಟ ಅಧಿಕಾರಿಗಳನ್ನು ವಜಾ ಮಾಡಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ಸಿದ್ದರಾಮಯ್ಯನವರ ರಕ್ಷಣೆಗೆ ಬಿಜೆಪಿ ಉನ್ನತ ನಾಯಕರು ಕೈಜೋಡಿಸಿದ್ದಾರೆ. ಒಳಒಪ್ಪಂದದಿಂದ ಅವರ ಮೇಲಿನ ಯಾವುದೇ ಹಗರಣವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುತ್ತಿಲ್ಲ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಜಾತ್ಯತೀತ, ಸಮಾಜವಾದದ ಸೋಗು ಹಾಕಿರುವ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಆಗ್ರಹಿಸಿದರು.</p>.<p>ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಹೆಸರು ಮುಂಚೂಣಿಗೆ ಬಂದಿದೆ. ಈ ಹಗರಣವನ್ನು ಸಿಬಿಐಯಿಂದ ಪೂರ್ಣಪ್ರಮಾಣದಲ್ಲಿ ತನಿಖೆ ನಡೆಸಬೇಕು’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಹಗರಣದ ಕುರಿತು ಪೂರ್ಣಪ್ರಮಾಣದ ತನಿಖೆ ನಡೆಸುವಂತೆ ಒತ್ತಾಯಿಸಿ ಜುಲೈ 10ರಂದು ಮುಡಾ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ಮುಖ್ಯಮಂತ್ರಿಯವರ ರಾಜೀನಾಮೆಗೆ ಒತ್ತಾಯಿಸಲಾಗುವುದು’ ಎಂದರು.</p>.<p>‘ಮುಡಾದಿಂದ 10 ವರ್ಷಗಳ ಅವಧಿಯಲ್ಲಿ ಪಡೆದಿರುವ ನಿವೇಶನಗಳನ್ನು ರದ್ದುಗೊಳಿಸಬೇಕು. ಅರ್ಹರಿಗೆ ನೀಡಬೇಕು. ಭ್ರಷ್ಟ ಅಧಿಕಾರಿಗಳನ್ನು ವಜಾ ಮಾಡಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ಸಿದ್ದರಾಮಯ್ಯನವರ ರಕ್ಷಣೆಗೆ ಬಿಜೆಪಿ ಉನ್ನತ ನಾಯಕರು ಕೈಜೋಡಿಸಿದ್ದಾರೆ. ಒಳಒಪ್ಪಂದದಿಂದ ಅವರ ಮೇಲಿನ ಯಾವುದೇ ಹಗರಣವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುತ್ತಿಲ್ಲ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>