‘ಇಷ್ಟು ವರ್ಷ ಜನಗಣತಿ ಆಧರಿಸಿ ವಿವಿಧ ಜಾತಿಯವರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಸರ್ವರಿಗೂ ಸೌಲಭ್ಯ ಸಿಗಲು ಜಾತಿಗಣತಿ ಅವಶ್ಯ. ರಾಜ್ಯದಲ್ಲಿ ಕಾಂತರಾಜ ಅವರ ನೇತೃತ್ವದಲ್ಲಿ ನಡೆದ ಜಾತಿಗಣತಿಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಬೇಕು. ಸದನದ ಮುಂದಿಟ್ಟು ಅದು ವೈಜ್ಞಾನಿಕವೇ ಅಥವಾ ಅಲ್ಲವೇ ಎಂಬುದನ್ನು ಚರ್ಚಿಸಬೇಕು. ವೈಜ್ಞಾನಿಕವಾಗಿದ್ದರೆ ಅದರ ಅನುಸಾರ ಮೀಸಲಾತಿ, ಒಳ ಮೀಸಲಾತಿಯನ್ನೂ ಕಲ್ಪಿಸಬೇಕು’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.