<p><strong>ಧಾರವಾಡ</strong>: ‘ಕೆಟ್ಟದಾಗಿ ಮಾತನಾಡುವುದು ಸಂಸ್ಕಾರ ಅಲ್ಲ. ಲಕ್ಷಗಟ್ಟಲೇ ಜನರನ್ನು ಪ್ರತಿನಿಧಿಸುವವರೇ (ಶಾಸಕರು) ಕೆಟ್ಟದಾಗಿ ಮಾತನಾಡಿದರೆ ಸಮಾಜಕ್ಕೆ ಯಾವ ಸಂದೇಶ ರವಾನೆ ಆಗುತ್ತದೆ?’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದರು.</p>.<p>ಶಾಸಕ ಮುನಿರತ್ನ ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಅದು ತಮ್ಮ ಧ್ವನಿಯಲ್ಲ ಎಂದು ಅವರು ಸಮರ್ಥಿಸಿಕೊಳ್ಳಲು ಮುಂದಾಗಿದ್ದಾರೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ’ ಎಂದರು.</p>.<p>‘ಹಣ ನೀಡಿ ಮತ ಹಾಕಿಸಿಕೊಳ್ಳುವವರು ಮತ್ತು ಹಣ ಪಡೆದು ಮತ ಹಾಕುವವರು ಇರುವವರೆಗೆ ಪ್ರಜಾಪ್ರಭುತ್ವದ ಆಶಯ ಸಾಕಾರವಾಗಲ್ಲ. ಈಗಿನ ರಾಜಕಾರಣದಲ್ಲಿ ನೈತಿಕತೆ ಇಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>‘ದೇಶದಲ್ಲಿ ಅನೇಕ ಜಾತಿಯವರು ಇದ್ದಾರೆ. ಎಲ್ಲರೂ ಹೊಂದಿಕೊಂಡು ಬಾಳಬೇಕು. ಗಲಾಟೆ ಮಾಡುವವರು, ಬೆಂಕಿ ಹಚ್ಚುವವರು ಕೆಲವರು ಇರುತ್ತಾರೆ. ಸಮಾಜ ಘಾತುಕರನ್ನು ಮಟ್ಟ ಹಾಕಬೇಕು. ಉತ್ತರ ಪ್ರದೇಶದಲ್ಲಿ ಮಾಡಿದಂತೆ ಬಿಗಿ ಮಾಡಬೇಕು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಕೆಟ್ಟದಾಗಿ ಮಾತನಾಡುವುದು ಸಂಸ್ಕಾರ ಅಲ್ಲ. ಲಕ್ಷಗಟ್ಟಲೇ ಜನರನ್ನು ಪ್ರತಿನಿಧಿಸುವವರೇ (ಶಾಸಕರು) ಕೆಟ್ಟದಾಗಿ ಮಾತನಾಡಿದರೆ ಸಮಾಜಕ್ಕೆ ಯಾವ ಸಂದೇಶ ರವಾನೆ ಆಗುತ್ತದೆ?’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದರು.</p>.<p>ಶಾಸಕ ಮುನಿರತ್ನ ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಅದು ತಮ್ಮ ಧ್ವನಿಯಲ್ಲ ಎಂದು ಅವರು ಸಮರ್ಥಿಸಿಕೊಳ್ಳಲು ಮುಂದಾಗಿದ್ದಾರೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ’ ಎಂದರು.</p>.<p>‘ಹಣ ನೀಡಿ ಮತ ಹಾಕಿಸಿಕೊಳ್ಳುವವರು ಮತ್ತು ಹಣ ಪಡೆದು ಮತ ಹಾಕುವವರು ಇರುವವರೆಗೆ ಪ್ರಜಾಪ್ರಭುತ್ವದ ಆಶಯ ಸಾಕಾರವಾಗಲ್ಲ. ಈಗಿನ ರಾಜಕಾರಣದಲ್ಲಿ ನೈತಿಕತೆ ಇಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>‘ದೇಶದಲ್ಲಿ ಅನೇಕ ಜಾತಿಯವರು ಇದ್ದಾರೆ. ಎಲ್ಲರೂ ಹೊಂದಿಕೊಂಡು ಬಾಳಬೇಕು. ಗಲಾಟೆ ಮಾಡುವವರು, ಬೆಂಕಿ ಹಚ್ಚುವವರು ಕೆಲವರು ಇರುತ್ತಾರೆ. ಸಮಾಜ ಘಾತುಕರನ್ನು ಮಟ್ಟ ಹಾಕಬೇಕು. ಉತ್ತರ ಪ್ರದೇಶದಲ್ಲಿ ಮಾಡಿದಂತೆ ಬಿಗಿ ಮಾಡಬೇಕು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>