ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ: ನನ್ನ ಗಂಡ ಮಾಡಿದ್ದು ತಪ್ಪು ಎಂದ ಆರೋಪಿ ಪತ್ನಿ

Last Updated 6 ಜುಲೈ 2022, 8:22 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಬಹಳ‌ ಒಳ್ಳೆಯವರು. ಅವರನ್ನು ಕೊಲೆ ಮಾಡುವ ಮೂಲಕ ನನ್ನ ಗಂಡ ತಪ್ಪು ಮಾಡಿದ್ದಾರೆ. ಆದರೆ, ಕೊಲೆಗೆ ಕಾರಣವೇನು ಎಂಬುದು ಗೊತ್ತಿಲ್ಲ ಎಂದು ಆರೋಪಿ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ನಮಗೂ ಗುರೂಜಿಗೂ ಯಾವುದೇ ಗಲಾಟೆ ಇರಲಿಲ್ಲ. ಅಪಾರ್ಟ್‌ಮೆಂಟ್ ನನ್ನ ಹೆಸರಲ್ಲಿದೆ ಎನ್ನುವುದು ಸುಳ್ಳು. ಬ್ಯಾಂಕ್‌ನಲ್ಲಿ ಸಾಲ ಮಾಡಿ ಪ್ಲ್ಯಾಟ್ ಖರೀದಿ ಮಾಡಿದ್ದೇವೆ ಎಂದರು.

ನಾನು 2005ರಲ್ಲಿ ಸರಳ ಜೀವನ ಸಂಸ್ಥೆ ಸೇರಿಕೊಂಡಿದ್ದೆ. 2019ರಲ್ಲಿ ಮುಂಬೈಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದೆ. ನನ್ನ ಪತಿ ಕೂಡಾ 2016ರಲ್ಲಿ ಕೆಲಸ ಬಿಟ್ಟಿದ್ದರು. ಯಾಕೆ ಬಿಟ್ಟಿದ್ದರು ಎಂಬುದುಗೊತ್ತಿಲ್ಲ. ಪತಿ ಹೆಸರಿನಲ್ಲಿ ಗುರೂಜಿ ಆಸ್ತಿ ಮಾಡಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ನಾಲ್ಕೈದು ದಿನಗಳಿಂದ ಪತಿ ಮನೆಗೆ ಬಂದಿರಲಿಲ್ಲ. ಕರೆ ಮಾಡಿ ವಿಚಾರಿಸಿದಾಗ, ಕೆಲಸದಲ್ಲಿದ್ದೇನೆ ಎನ್ನುತ್ತಿದ್ದರು. ಆದರೆ, ಮಂಗಳವಾರ ಬೆಳಿಗ್ಗೆ ಟಿ.ವಿ.ಯಲ್ಲಿ ನೋಡಿದಾಗಲೇ ಅವರು ಸ್ವಾಮೀಜಿ ಅವರನ್ನು ಕೊಲೆ ಮಾಡಿರುವ ವಿಷಯ ಗೊತ್ತಾಯಿತು. ನಂತರ, ವಿದ್ಯಾನಗರ ಠಾಣೆ ಪೊಲೀಸರು ವಿಚಾರಣೆಗೆ ಕರೆದಾಗ ಹೋಗಿ ನನಗೆ ಗೊತ್ತಿದ್ದನ್ನು ಹೇಳಿದ್ದೇನೆ ಎಂದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT