ಕಲಘಟಗಿ: ಚಿನ್ನಾಭರಣದ ಆಸೆಗೆ ವೃದ್ಧೆಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಆಲದಕಟ್ಟಿ ಗ್ರಾಮದ ಕಬ್ಬಿನ ಹೊಲದಲ್ಲಿ ಶನಿವಾರ ರಾತ್ರಿ ನಡೆದಿದೆ.
ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ ತಿಪ್ಪವ್ವ ತಂಬೂರ(82) ಕೊಲೆಯಾದವರು. ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಅವರ ಕಬ್ಬಿನ ಹೊಲದಲ್ಲಿ ತಿಪ್ಪವ್ವ ಅವರನ್ನು ಕೊಲೆ ಮಾಡಿ ಕೊರಳಲಿದ್ದ ಚಿನ್ನಭಾರಣ ದೋಚಲಾಗಿದೆ.
ತಿಪ್ಪವ್ವ ಅವರ ಮೃತ ದೇಹ ನೋಡಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಕಲಘಟಗಿ ಠಾಣೆ ಸಿಪಿಐ ಶ್ರೀಶೈಲ ಕೌಜಲಗಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.