<p><strong>ಧಾರವಾಡ:</strong> ‘ಸಂಗೀತವು ಕಠಿಣ ಪರಿಶ್ರಮ, ಶ್ರದ್ಧೆಗೆ ಒಲಿಯುವ ವಿದ್ಯೆ. ಸಂಗೀತ ಸಿದ್ಧಿಸಲು ಮೊದಲು ಉತ್ತಮ ಕೇಳುಗರಾಗಿರಬೇಕು’ ಎಂದು ಪಂಡಿತ ವೆಂಕಟೇಶಕುಮಾರ ಹೇಳಿದರು.</p>.<p>ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಂಭ್ರಮದ ಅಂಗವಾಗಿ ಬುಧವಾರ ಆಯೋಜಿಸಿದ್ದ ‘ಧರೆಗೆ ದೊಡ್ಡವರು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಾಧನೆಗೆ ಪೂರಕವಾದ ವಾತಾವರಣ ಸೃಷ್ಟಿಸುವ ಶಕ್ತಿ ಸಂಗೀತಕ್ಕಿದೆ. ಯುವಜನರು ಸಂಗೀತದ ಆಸಕ್ತಿ ಬೆಳೆಸಿಕೊಳ್ಳಬೇಕು. ಬೇಗ ಸಾಧಕರಾಗಬೇಕೆಂಬ ಹಂಬಲ ಇರಬಾರದು’ ಎಂದರು.</p>.<p>‘ಪಂಚಾಕ್ಷರಿ ಮತ್ತು ಪುಟ್ಟರಾಜ ಗವಾಯಿಯವರು ನನಗೆ ಸಂಗೀತದ ಜತೆಗೆ ಸಂಸ್ಕಾರ ಕಲಿಸಿದರು. ಪಂಡಿತ ಮಲ್ಲಿಕಾರ್ಜುನ ಮನ್ಸೂರ, ಗಂಗೂಬಾಯಿ ಹಾನಗಲ್ ಮೊದಲಾದವರು ಶ್ರೇಷ್ಠ ಸಂಗೀತಗಾರಾಗಿದ್ದರು. ಸಂಗೀತಗಾರರ ಬಗ್ಗೆ ವಿದ್ಯಾರ್ಥಿಗಳು ಹೆಚ್ಚು ಅಧ್ಯಯನ ನಡೆಸಬೇಕು’ ಎಂದು ಸಲಹೆ ನೀಡಿದರು. </p>.<p>ಪ್ರಾಚಾರ್ಯ ಶಶಿಧರ ತೋಡಕರ, ಜಯದೇವಿ ಜಂಗಮಶೆಟ್ಟಿ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಂಕರ ಕುಂಬಿ, ಸತೀಶ ತುರಮರಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಸಂಗೀತವು ಕಠಿಣ ಪರಿಶ್ರಮ, ಶ್ರದ್ಧೆಗೆ ಒಲಿಯುವ ವಿದ್ಯೆ. ಸಂಗೀತ ಸಿದ್ಧಿಸಲು ಮೊದಲು ಉತ್ತಮ ಕೇಳುಗರಾಗಿರಬೇಕು’ ಎಂದು ಪಂಡಿತ ವೆಂಕಟೇಶಕುಮಾರ ಹೇಳಿದರು.</p>.<p>ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಂಭ್ರಮದ ಅಂಗವಾಗಿ ಬುಧವಾರ ಆಯೋಜಿಸಿದ್ದ ‘ಧರೆಗೆ ದೊಡ್ಡವರು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಾಧನೆಗೆ ಪೂರಕವಾದ ವಾತಾವರಣ ಸೃಷ್ಟಿಸುವ ಶಕ್ತಿ ಸಂಗೀತಕ್ಕಿದೆ. ಯುವಜನರು ಸಂಗೀತದ ಆಸಕ್ತಿ ಬೆಳೆಸಿಕೊಳ್ಳಬೇಕು. ಬೇಗ ಸಾಧಕರಾಗಬೇಕೆಂಬ ಹಂಬಲ ಇರಬಾರದು’ ಎಂದರು.</p>.<p>‘ಪಂಚಾಕ್ಷರಿ ಮತ್ತು ಪುಟ್ಟರಾಜ ಗವಾಯಿಯವರು ನನಗೆ ಸಂಗೀತದ ಜತೆಗೆ ಸಂಸ್ಕಾರ ಕಲಿಸಿದರು. ಪಂಡಿತ ಮಲ್ಲಿಕಾರ್ಜುನ ಮನ್ಸೂರ, ಗಂಗೂಬಾಯಿ ಹಾನಗಲ್ ಮೊದಲಾದವರು ಶ್ರೇಷ್ಠ ಸಂಗೀತಗಾರಾಗಿದ್ದರು. ಸಂಗೀತಗಾರರ ಬಗ್ಗೆ ವಿದ್ಯಾರ್ಥಿಗಳು ಹೆಚ್ಚು ಅಧ್ಯಯನ ನಡೆಸಬೇಕು’ ಎಂದು ಸಲಹೆ ನೀಡಿದರು. </p>.<p>ಪ್ರಾಚಾರ್ಯ ಶಶಿಧರ ತೋಡಕರ, ಜಯದೇವಿ ಜಂಗಮಶೆಟ್ಟಿ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಂಕರ ಕುಂಬಿ, ಸತೀಶ ತುರಮರಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>