ಬುಧವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಹಿಂದಿನ ಚುನಾವಣೆಯಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಗೆಲುವು ಪಡೆದಿದ್ದ ಪ್ರತಾಪಗೌಡ ಪಾಟೀಲ ಮತ್ತು ಕಡಿಮೆ ಅಂತರದಿಂದ ಸೋತಿದ್ದ ಬಿಜೆಪಿಯ ಬಸನಗೌಡ ತುರ್ವಿಹಾಳ ಇಬ್ಬರೂ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಬೇರೆ ಪಕ್ಷದಿಂದ ಬಂದವರಿಗೇ ಟಿಕೆಟ್ ನೀಡಬೇಕು ಎನ್ನುವುದು ಮೊದಲೇ ನಿರ್ಧರಿತವಾಗಿತ್ತು’ ಎಂದರು.