ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ತಡೆಯಬಹುದಿತ್ತು. ಆದರೆ, ರಾಜಕೀಯ ಲಾಭಕ್ಕಾಗಿ ಅವರೇ ಈ ತಂತ್ರಗಾರಿಕೆ ಮಾಡಿದ್ದಾರೆ. ಎಐಎಂಐಎಂ ದೇಶದ್ರೋಹಿ ಪಕ್ಷವಾಗಿದ್ದು, ಭಯೋತ್ಪಾದನೆ ಬೆಳೆಸುತ್ತದೆ. ಅವರಿಗೆ ಅನುಮತಿ ಅವಕಾಶ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.