<p><strong>ಹುಬ್ಬಳ್ಳಿ:</strong> ‘ಗ್ರಾಮೀಣ ಭಾಗದ ಅಭಿವೃದ್ಧಿಗೆ ನಬಾರ್ಡ್ ಆದ್ಯತೆ ನೀಡುತ್ತಿದೆ. ಸ್ಟಾರ್ಟ್ ಅಪ್ಗಳಿಗೂ ಧನಸಹಾಯ ನೀಡಲಾಗುತ್ತಿದೆ’ ಎಂದು ನಬಾರ್ಡ್ ಅಧ್ಯಕ್ಷ ಡಾ.ಜಿ.ಆರ್ಚಿಂತಾಲಾ ಹೇಳಿದರು.</p>.<p>ಇಲ್ಲಿನ ದೇಶಪಾಂಡೆ ಸ್ಟಾರ್ಟ್ಅಪ್ ಕೇಂದ್ರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶಪಾಂಡೆ ಫೌಂಡೇಷನ್ ಉತ್ತಮ ಕೆಲಸ ಮಾಡುತ್ತಿದೆ. ನವಲಗುಂದ ಹಾಗೂ ನರಗುಂದದಲ್ಲಿ ರೈತರಿಗೆ ಕೃಷಿ ಹೊಂಡಗಳನ್ನು ನಿರ್ಮಿಸಿಕೊಟ್ಟಿದ್ದು, ಇದರಿಂದ ರೈತರ ಆದಾಯ ಹೆಚ್ಚಾಗಿದೆ’ ಎಂದರು.</p>.<p>‘ರೈತರ ಉತ್ಪನ್ನಗಳ ಮಾರಾಟಕ್ಕೆ ನಬಾರ್ಡ್ ಸಹಕಾರ ನೀಡುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಈ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಪರಿಚಯಿಸಲಾಗುತ್ತಿದೆ.ಕೊಲ್ಲಾಪುರ ಚಪ್ಪಲಿ ಮಾರಾಟಕ್ಕೆ ನೆರವು ನೀಡಲಾಗಿದೆ. ಸಹಕಾರಿ ಬ್ಯಾಂಕ್ಗಳಿಗೆ ಸಾಲ ನೀಡಲಾಗುತ್ತಿದ್ದು, ಹಲವು ಸಂಸ್ಥೆಗಳೊಂದಿಗೆ ರೈತರ ಬೆಳೆ ಅಭಿವೃದ್ಧಿಗೆ ಪೂರಕವಾಗಿ ಯೋಜನೆ ರೂಪಿಸಿಕೊಳ್ಳಲಾಗಿದೆ’ ಎಂದರು.</p>.<p>ನಬಾರ್ಡ್ನ ಪ್ರಧಾನ ವ್ಯವಸ್ಥಾಪಕ ಟಿ.ರಮೇಶ್ ಅವರು ಮಾತನಾಡಿ, ‘ದೇಶಪಾಂಡೆ ಫೌಂಡೇಷನ್ನಿಂದ ನಿರ್ಮಾಣವಾಗಿರುವ ಕೃಷಿ ಹೊಂಡಗಳಿಂದ ರೈತರ ಆದಾಯ ಹೆಚ್ಚಾಗಿದೆ. ನವಲಗುಂದದ ಕಲ್ಮೇಶ್ವರ ರೈತ ಉತ್ಪಾದಕ ಸಂಸ್ಥೆಯು ವಾರ್ಷಿಕ ₹ 15 ಕೋಟಿ ಆದಾಯ ಗಳಿಸುತ್ತಿದೆ’ ಎಂದರು.</p>.<p>‘ರಾಜ್ಯಕ್ಕೆ ಒಟ್ಟು ₹ 24 ಸಾವಿರ ಕೋಟಿ ಸಾಲ ನೀಡಲಾಗಿದ್ದು, ಇದರಲ್ಲಿ ₹ 15 ಸಾವಿರ ಕೋಟಿ ಗ್ರಾಮೀಣ ಸಹಕಾರಿ ಬ್ಯಾಂಕ್ಗಳಿಗೆ ಬೆಳೆಸಾಲ ಮಾದರಿಯಲ್ಲಿ ನೀಡಲಾಗಿದೆ.ಕೃಷಿಗೆ ಸಂಬಂಧಿಸಿದಂತೆ ದೀರ್ಘಾವಧಿ ಸಾಲದ ರೂಪದಲ್ಲಿ ಒಟ್ಟು ₹8.67 ಸಾವಿರ ಕೋಟಿ ನೀಡಲಾಗಿದೆ. ರಾಜ್ಯ ಸರ್ಕಾರಕ್ಕೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ₹2 ಸಾವಿರ ಕೋಟಿ ನೀಡಲು ಉದ್ದೇಶಿಸಲಾಗಿದ್ದು, ಈಗಾಗಲೇ ಅಭಿವೃದ್ಧಿ ಪಡಿಸಿರುವ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ’ ಎಂದು ವಿವರಿಸಿದರು.</p>.<p>ದೇಶಪಾಂಡೆ ಫೌಂಡೇಶನ್ ಸಹ ಸಂಸ್ಥಾಪಕ ಗುರುರಾಜ ದೇಶಪಾಂಡೆ, ಜಯಶ್ರೀ ದೇಶಪಾಂಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಗ್ರಾಮೀಣ ಭಾಗದ ಅಭಿವೃದ್ಧಿಗೆ ನಬಾರ್ಡ್ ಆದ್ಯತೆ ನೀಡುತ್ತಿದೆ. ಸ್ಟಾರ್ಟ್ ಅಪ್ಗಳಿಗೂ ಧನಸಹಾಯ ನೀಡಲಾಗುತ್ತಿದೆ’ ಎಂದು ನಬಾರ್ಡ್ ಅಧ್ಯಕ್ಷ ಡಾ.ಜಿ.ಆರ್ಚಿಂತಾಲಾ ಹೇಳಿದರು.</p>.<p>ಇಲ್ಲಿನ ದೇಶಪಾಂಡೆ ಸ್ಟಾರ್ಟ್ಅಪ್ ಕೇಂದ್ರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶಪಾಂಡೆ ಫೌಂಡೇಷನ್ ಉತ್ತಮ ಕೆಲಸ ಮಾಡುತ್ತಿದೆ. ನವಲಗುಂದ ಹಾಗೂ ನರಗುಂದದಲ್ಲಿ ರೈತರಿಗೆ ಕೃಷಿ ಹೊಂಡಗಳನ್ನು ನಿರ್ಮಿಸಿಕೊಟ್ಟಿದ್ದು, ಇದರಿಂದ ರೈತರ ಆದಾಯ ಹೆಚ್ಚಾಗಿದೆ’ ಎಂದರು.</p>.<p>‘ರೈತರ ಉತ್ಪನ್ನಗಳ ಮಾರಾಟಕ್ಕೆ ನಬಾರ್ಡ್ ಸಹಕಾರ ನೀಡುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಈ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಪರಿಚಯಿಸಲಾಗುತ್ತಿದೆ.ಕೊಲ್ಲಾಪುರ ಚಪ್ಪಲಿ ಮಾರಾಟಕ್ಕೆ ನೆರವು ನೀಡಲಾಗಿದೆ. ಸಹಕಾರಿ ಬ್ಯಾಂಕ್ಗಳಿಗೆ ಸಾಲ ನೀಡಲಾಗುತ್ತಿದ್ದು, ಹಲವು ಸಂಸ್ಥೆಗಳೊಂದಿಗೆ ರೈತರ ಬೆಳೆ ಅಭಿವೃದ್ಧಿಗೆ ಪೂರಕವಾಗಿ ಯೋಜನೆ ರೂಪಿಸಿಕೊಳ್ಳಲಾಗಿದೆ’ ಎಂದರು.</p>.<p>ನಬಾರ್ಡ್ನ ಪ್ರಧಾನ ವ್ಯವಸ್ಥಾಪಕ ಟಿ.ರಮೇಶ್ ಅವರು ಮಾತನಾಡಿ, ‘ದೇಶಪಾಂಡೆ ಫೌಂಡೇಷನ್ನಿಂದ ನಿರ್ಮಾಣವಾಗಿರುವ ಕೃಷಿ ಹೊಂಡಗಳಿಂದ ರೈತರ ಆದಾಯ ಹೆಚ್ಚಾಗಿದೆ. ನವಲಗುಂದದ ಕಲ್ಮೇಶ್ವರ ರೈತ ಉತ್ಪಾದಕ ಸಂಸ್ಥೆಯು ವಾರ್ಷಿಕ ₹ 15 ಕೋಟಿ ಆದಾಯ ಗಳಿಸುತ್ತಿದೆ’ ಎಂದರು.</p>.<p>‘ರಾಜ್ಯಕ್ಕೆ ಒಟ್ಟು ₹ 24 ಸಾವಿರ ಕೋಟಿ ಸಾಲ ನೀಡಲಾಗಿದ್ದು, ಇದರಲ್ಲಿ ₹ 15 ಸಾವಿರ ಕೋಟಿ ಗ್ರಾಮೀಣ ಸಹಕಾರಿ ಬ್ಯಾಂಕ್ಗಳಿಗೆ ಬೆಳೆಸಾಲ ಮಾದರಿಯಲ್ಲಿ ನೀಡಲಾಗಿದೆ.ಕೃಷಿಗೆ ಸಂಬಂಧಿಸಿದಂತೆ ದೀರ್ಘಾವಧಿ ಸಾಲದ ರೂಪದಲ್ಲಿ ಒಟ್ಟು ₹8.67 ಸಾವಿರ ಕೋಟಿ ನೀಡಲಾಗಿದೆ. ರಾಜ್ಯ ಸರ್ಕಾರಕ್ಕೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ₹2 ಸಾವಿರ ಕೋಟಿ ನೀಡಲು ಉದ್ದೇಶಿಸಲಾಗಿದ್ದು, ಈಗಾಗಲೇ ಅಭಿವೃದ್ಧಿ ಪಡಿಸಿರುವ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ’ ಎಂದು ವಿವರಿಸಿದರು.</p>.<p>ದೇಶಪಾಂಡೆ ಫೌಂಡೇಶನ್ ಸಹ ಸಂಸ್ಥಾಪಕ ಗುರುರಾಜ ದೇಶಪಾಂಡೆ, ಜಯಶ್ರೀ ದೇಶಪಾಂಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>