<p><strong>ಹುಬ್ಬಳ್ಳಿ</strong>: ‘ಮಕ್ಕಳಿಗೆ ಮಹಾನ್ ವೀರರ ಇತಿಹಾಸವನ್ನು ತಿಳಿಸಬೇಕು. ಪುಸ್ತಕದ ಜ್ಞಾನವಲ್ಲದೆ ಪ್ರಾಪಂಚಿಕ ಜ್ಞಾನವನ್ನು ತಿಳಿಸಿ, ಸ್ಪರ್ಧಾತ್ಮಕ ಜಗತ್ತಿನತ್ತ ಸಾಗುವಂತೆ ಮಾಡಬೇಕು’ ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರ್ ಕಲಗೌಡ ಪಾಟೀಲ ಹೇಳಿದರು.</p>.<p>ಇಲ್ಲಿನ ಮಿನಿವಿಧಾನ ಸೌಧದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕೆಂಪೇಗೌಡ ಅವರು ಬೆಂಗಳೂರು ನಗರ ಕಟ್ಟಿ ಬೆಳೆಸಿದರು. ಇಂದು ಬೆಂಗಳೂರು ನಗರ ಸಾಕಷ್ಟು ಅಭಿವೃದ್ಧಿ ಕಂಡು, ಸಿಲಿಕಾನ್ ಸಿಟಿ ಎಂದು ಹೆಸರಾಗಿದೆ’ ಎಂದರು.</p>.<p>ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಬಸವರಾಜ ಹೊಸಮನಿ ಅವರು ಉಪನ್ಯಾಸ ನೀಡಿದರು.</p>.<p>ಗ್ರಾಮೀಣ ತಹಶೀಲ್ದಾರ್ ಜೆ.ಬಿ. ಮಜ್ಜಗಿ, ಗ್ರಾಮೀಣ ಬಿಇಒ ಉಮೇಶ ಬೊಮಕ್ಕನವರ, ಶಿವಾನಂದ ನಸಬಿ, ಸಂಜೀವ ದುಮ್ಮಕನಾಳ, ರಂಜಾನ್ ಕಿಲ್ಲೆದ, ಗೋಪಾಲ ಹಾಗೂ ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಮಕ್ಕಳಿಗೆ ಮಹಾನ್ ವೀರರ ಇತಿಹಾಸವನ್ನು ತಿಳಿಸಬೇಕು. ಪುಸ್ತಕದ ಜ್ಞಾನವಲ್ಲದೆ ಪ್ರಾಪಂಚಿಕ ಜ್ಞಾನವನ್ನು ತಿಳಿಸಿ, ಸ್ಪರ್ಧಾತ್ಮಕ ಜಗತ್ತಿನತ್ತ ಸಾಗುವಂತೆ ಮಾಡಬೇಕು’ ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರ್ ಕಲಗೌಡ ಪಾಟೀಲ ಹೇಳಿದರು.</p>.<p>ಇಲ್ಲಿನ ಮಿನಿವಿಧಾನ ಸೌಧದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕೆಂಪೇಗೌಡ ಅವರು ಬೆಂಗಳೂರು ನಗರ ಕಟ್ಟಿ ಬೆಳೆಸಿದರು. ಇಂದು ಬೆಂಗಳೂರು ನಗರ ಸಾಕಷ್ಟು ಅಭಿವೃದ್ಧಿ ಕಂಡು, ಸಿಲಿಕಾನ್ ಸಿಟಿ ಎಂದು ಹೆಸರಾಗಿದೆ’ ಎಂದರು.</p>.<p>ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಬಸವರಾಜ ಹೊಸಮನಿ ಅವರು ಉಪನ್ಯಾಸ ನೀಡಿದರು.</p>.<p>ಗ್ರಾಮೀಣ ತಹಶೀಲ್ದಾರ್ ಜೆ.ಬಿ. ಮಜ್ಜಗಿ, ಗ್ರಾಮೀಣ ಬಿಇಒ ಉಮೇಶ ಬೊಮಕ್ಕನವರ, ಶಿವಾನಂದ ನಸಬಿ, ಸಂಜೀವ ದುಮ್ಮಕನಾಳ, ರಂಜಾನ್ ಕಿಲ್ಲೆದ, ಗೋಪಾಲ ಹಾಗೂ ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>