ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ: ವಿದ್ಯಾಧರ ವ್ಯಾಸ್‌ಗೆ ರಾಷ್ಟ್ರೀಯ ಪ್ರಶಸ್ತಿ

Published 22 ಡಿಸೆಂಬರ್ 2023, 15:46 IST
Last Updated 22 ಡಿಸೆಂಬರ್ 2023, 15:46 IST
ಅಕ್ಷರ ಗಾತ್ರ

ಧಾರವಾಡ: ನಗರದ ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಪುಣೆಯ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ವಿದ್ಯಾಧರ ವ್ಯಾಸ್, ರಾಷ್ಟ್ರೀಯ ಯುವ ಪ್ರಶಸ್ತಿಗೆ ಧಾರವಾಡದ ವಾದ್ಯ ಸಂಗೀತಗಾರ ರವಿಕಿರಣ ನಾಕೋಡ ಮತ್ತು ಗದುಗಿನ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ವೆಂಕಟೇಶ ಆಲಕೋಡ ಆಯ್ಕೆಯಾಗಿದ್ಧಾರೆ.

ರವಿಕಿರಣ ನಾಕೋಡ
ರವಿಕಿರಣ ನಾಕೋಡ

ರಾಷ್ಟ್ರೀಯ ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಫಲಕ, ಯುವಪ್ರಶಸ್ತಿಯು ₹ 25 ಸಾವಿರ ನಗದು, ಫಲಕ ಒಳಗೊಂಡಿದೆ. ಧಾರವಾಡದ ಆಲೂರು ವೆಂಕಟರಾವ್‌ ಭವನದಲ್ಲಿ ಡಿಸೆಂಬರ್‌ 31ರರ ಸಂಜೆ 5.30ಕ್ಕೆ ನಡೆಯುವ ಮಲ್ಲಿಕಾರ್ಜುನ ಮನಸೂರ ಅವರ 113ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವೆಂಕಟೇಶ ಆಲಕೋಡ
ವೆಂಕಟೇಶ ಆಲಕೋಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT