<p><strong>ಧಾರವಾಡ:</strong> ‘ಸಾರ್ವಜನಿಕರ ಆರೋಗ್ಯ ರಕ್ಷಣೆಯು ಸರ್ಕಾರದ ಜವಾಬ್ದಾರಿ ಮಾತ್ರ ಅಲ್ಲ, ಎಲ್ಲ ನಾಗರಿಕರ ಜವಾಬ್ದಾರಿಯೂ ಆಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ ಪಾಟೀಲ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಸಹಯೋಗದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಹೆಪಟೈಟಿಸ್ ದಿನಾಚರಣೆ ಮತ್ತು ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ಹಾಗೂ ಕೊಳಚೆ ಪ್ರದೇಶಗಳಲ್ಲಿನ ಜನರಿಗೆ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಅರಿವು ಮೂಡಿಸಬೇಕಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ.ಹೊನಕೇರಿ ಮಾತನಾಡಿ, ‘ಹೆಪಟೈಟಿಸ್ ಬೇಗನೆ ಹರಡುವ ರೋಗವಾಗಿದ್ದು, ಸಮಯಕ್ಕೆ ತಕ್ಕ ಚಿಕಿತ್ಸೆ, ಲಸಿಕೆ ಹಾಗೂ ಆರೋಗ್ಯಕರ ಜೀವನಶೈಲಿ ಅನುಸರಿಸುವ ಮೂಲಕ ತಡೆಗಟ್ಟಬಹುದು’ ಎಂದರು.</p>.<p>ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ರವೀಂದ್ರ ಬೊವೇರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್.ಪಾತ್ರೋಟ, ಆರೋಗ್ಯ ಸಂಸ್ಥೆ ಸಲಹೆಗಾರರ ಡಾ.ಸತೀಶ್ ಘಾಟಕೆ, ಡಾ.ಮಹೇಶ ಚಿತ್ತರಗಿ, ಡಾ. ಕಿರಣ ಕುಲಕರ್ಣಿ, ಎನ್.ಎಂ.ಅಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಸಾರ್ವಜನಿಕರ ಆರೋಗ್ಯ ರಕ್ಷಣೆಯು ಸರ್ಕಾರದ ಜವಾಬ್ದಾರಿ ಮಾತ್ರ ಅಲ್ಲ, ಎಲ್ಲ ನಾಗರಿಕರ ಜವಾಬ್ದಾರಿಯೂ ಆಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ ಪಾಟೀಲ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಸಹಯೋಗದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಹೆಪಟೈಟಿಸ್ ದಿನಾಚರಣೆ ಮತ್ತು ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ಹಾಗೂ ಕೊಳಚೆ ಪ್ರದೇಶಗಳಲ್ಲಿನ ಜನರಿಗೆ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಅರಿವು ಮೂಡಿಸಬೇಕಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ.ಹೊನಕೇರಿ ಮಾತನಾಡಿ, ‘ಹೆಪಟೈಟಿಸ್ ಬೇಗನೆ ಹರಡುವ ರೋಗವಾಗಿದ್ದು, ಸಮಯಕ್ಕೆ ತಕ್ಕ ಚಿಕಿತ್ಸೆ, ಲಸಿಕೆ ಹಾಗೂ ಆರೋಗ್ಯಕರ ಜೀವನಶೈಲಿ ಅನುಸರಿಸುವ ಮೂಲಕ ತಡೆಗಟ್ಟಬಹುದು’ ಎಂದರು.</p>.<p>ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ರವೀಂದ್ರ ಬೊವೇರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್.ಪಾತ್ರೋಟ, ಆರೋಗ್ಯ ಸಂಸ್ಥೆ ಸಲಹೆಗಾರರ ಡಾ.ಸತೀಶ್ ಘಾಟಕೆ, ಡಾ.ಮಹೇಶ ಚಿತ್ತರಗಿ, ಡಾ. ಕಿರಣ ಕುಲಕರ್ಣಿ, ಎನ್.ಎಂ.ಅಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>