ಹದಿನೈದು ದಿನಗಳಿಂದ ಸಿದ್ಧತೆಯಲ್ಲಿ ತೊಡಗಿದ್ದ ಜಿಲ್ಲಾಡಳಿತವು, ಬಹುತೇಕ ಪ್ರಮುಖ ಮತ್ತು ಒಳ ರಸ್ತೆಗಳನ್ನು ದುರಸ್ತಿಗೊಳಿಸಿದೆ. ಅಲ್ಲದೆ ಕರ್ನಾಟಕ ಕಾಲೇಜು, ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಶ್ವವಿದ್ಯಾಲಯದ ಆವರಣಗಳನ್ನು ಸ್ವಚ್ಛಗೊಳಿಸಿ, ಅಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಇದೀಗ ನಗರಕ್ಕೆ ಬರುವ ಅತಿಥಿಗಳ ಸ್ವಾಗತಕ್ಕೆ ಸಜ್ಜಾಗಿದ್ದು, ಮಿನಿ ವಿಧಾನಸೌಧದ ಆವರಣದಲ್ಲಿ ಸಾರಿಗೆ ವ್ಯವಸ್ಥೆಯ ನಿಯಂತ್ರಣ ಕೊಠಡಿ ತೆರೆಯಲಾಗಿದೆ.