ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Youth Day | ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ಸ್ವಾಗತಿಸಲು ರಂಗೋಲಿಯ ಚಿತ್ತಾರ

ಯುವಜನೋತ್ಸವ ಉದ್ಘಾಟನೆಗೆ ಹುಬ್ಬಳ್ಳಿಗೆ ಬರಲಿರುವ ಪ್ರಧಾನಿ ಮೋದಿ
Last Updated 12 ಜನವರಿ 2023, 6:39 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಇಂದು(ಗುರುವಾರ) ಸಂಜೆ ಹುಬ್ಬಳ್ಳಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಮಹಿಳಾ ಕಾರ್ಯಕರ್ತರು ಹಾಗೂ ಎಸ್.ಆರ್. ಬೊಮ್ಮಾಯಿ ಶಾಲೆ ಶಾಲೆ ವಿದ್ಯಾರ್ಥಿಗಳು ವಿಮಾನ ನಿಲ್ದಾಣದ ಎದುರು ರಂಗೋಲಿ ಬಿಡಿಸುವಲ್ಲಿ ನಿರತರಾಗಿದ್ದಾರೆ.

'ನಿಲ್ದಾಣದ ಪ್ರವೇಶ ದ್ವಾರದಿಂದ ಅಕ್ಷಯ ಪಾರ್ಕ್' ವರೆಗೂ ರಂಗೋಲಿ ಹಾಕಲು ನಿರ್ಧರಿಸಿದ್ದು, ಮಧ್ಯಾಹ್ನ‌ 2ರವರೆಗೂ ಈ ಕಾರ್ಯ ನಡೆಯಲಿದೆ. 50ಕ್ಕೂ ಹೆಚ್ಚು ಮಂದಿ ಇದ್ದೇವೆ' ಎಂದು ಕಾರ್ಯಕರ್ತೆ ಕಮಲವ್ವ ಮ್ಯಾಗೇರಿ ಹೇಳಿದರು.

ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪ್ರಧಾನಿ ಸಂಚರಿಸುವ ಮಾರ್ಗದುದ್ದಕ್ಕೂ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಕಟ್ಟೆಚ್ಚರವಹಿಸಲಾಗಿದೆ. ಅನುಮಾನಾಸ್ಪದವಾಗಿ ಸಂಚರಿಸುವ ವಾಹನ ಸವಾರರ ಹಾಗೂ ಸಾರ್ವಜನಿಕರನ್ನು ಪೊಲೀಸರು ತಡೆದು ವಿಚಾರಿಸುತ್ತಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT