ನವಲಗುಂದ: ಪುರಸಭೆ ಉಪಾಧ್ಯಕ್ಷೆ ಸ್ಥಾನಕ್ಕೆ ಖೈರುನಬಿ ನಾಶಿಪುಡಿ ರಾಜೀನಾಮೆ ಸಲ್ಲಿಸಿದ್ದರು. ಉಪವಿಭಾಗಧಿಕಾರಿ ಅಶೋಕ ತೇಲಿ ಅವರಿಗೆ ಸೋಮವಾರ ರಾಜೀನಾಮೆ ಪತ್ರ ಸಲ್ಲಿಸಿದರು.
ಬಿಜೆಪಿ ಸದಸ್ಯರು ಹಾಗು ಮುಖಂಡರ ನಿರಂತರ ಧರಣಿ ಸತ್ಯಾಗ್ರಹ ನಡೆಸಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ ಜಾಧವ ರಾಜೀನಾಮೆ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೂ ರಾಜಿ ನಾಮೆ ನೀಡುವಂತೆ ಬಿಜೆಪಿ ಮುಖಂಡರು ಒತ್ತಡ ಹೇರಿದ್ದರು.
ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳು ತೆರವಾಗಿರುವುದರಿಂದ ಯಾರು ಪುರಸಭೆ ಗದ್ದುಗೆ ಏರಲಿದ್ದಾರೆಂದು ಕೂತುಹಲ ಮೂಡಿಸಿದೆ.