<p><strong>ನವಲಗುಂದ:</strong> ಹೆಸರು ಬೆಳೆದಿರುವ ರೈತರ ಜಮೀನುಗಳಿಗೆ ಸಹಾಯಕ ಕೃಷಿ ನಿರ್ದೇಶಕ ತಿಪ್ಪೆಸ್ವಾಮಿ ವಿ., ಬೆಳವಟಗಿ ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ರಫಿ ಮತ್ತು ಅಧಿಕಾರಿಗಳು ಈಚೆಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬೆಳೆಗೆ ಹಳದಿ ಹಾಗೂ ಬೂದು ರೋಗ ಬಂದಿದ್ದರಿಂದ ರೈತರು ಆತಂಕಗೊಂಡಿರುವ ಕುರಿತು ‘ಪ್ರಜಾವಾಣಿ’ಯಲ್ಲಿ ಜುಲೈ 28ರಂದು ‘ಹೆಸರು ಬೆಳೆಗೆ ಹಳದಿ ರೋಗ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.</p>.<p>ರಫಿ ಮಾತನಾಡಿ, ‘ನಿರಂತರವಾಗಿ ಮಳೆಯಾಗುತ್ತಿದ್ದು, ಜಮೀನಿನಲ್ಲಿ ನಿಂತ ನೀರನ್ನು ಬಸಿಗಾಲುವೆ ಮೂಲಕ ಹೊರ ಹಾಕಬೇಕು. ತಗ್ಗು ಪ್ರದೇಶಗಳಲ್ಲಿ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿದ್ದು, ಬೆಳೆ ಪುನಶ್ಚೇತನಕ್ಕೆ 13:0:45 ಗೊಬ್ಬರವನ್ನು ಪ್ರತಿ ಲೀಟರ್ ನೀರಿಗೆ 5 ಗ್ರಾಂ ಬೆರೆಸಿ ಸಿಂಪಡಣೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಹೆಸರು ಮತ್ತು ಉದ್ದು ಬೆಳೆಗಳಲ್ಲಿ ಎಲೆ ಚುಕ್ಕೆ ರೋಗ ನಿರ್ವಹಣೆಗೆ ರಾಸಾಯನಿಕ ಸಿಂಪಡಿಸಬೇಕು. ಹೆಸರು ಮತ್ತು ಉದ್ದಿನ ಬೆಳೆಗಳಲ್ಲಿ ನಂಜುರೋಗ ಕಂಡುಬಂದಲ್ಲಿ ಪ್ರಾರಂಭದ ಹಂತದಲ್ಲಿಯೇ ಸಸಿಗಳನ್ನು ಗುರುತಿಸಿ ಕಿತ್ತು ಮಣ್ಣಿನಲ್ಲಿ ಹೂಳಬೇಕು ಎಂದರು.</p>.<p>ಈ ವೇಳೆ ಕೃಷಿ ಇಲಾಖೆ ಅಧಿಕಾರಿ ಎಂ.ಕೆ.ಕಳ್ಳಿಮನಿ, ರೈತರಾದ ನಾಗಪ್ಪ ಹಳ್ಳದ, ಶಿವಾನಂದ ಹಳ್ಳದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ಹೆಸರು ಬೆಳೆದಿರುವ ರೈತರ ಜಮೀನುಗಳಿಗೆ ಸಹಾಯಕ ಕೃಷಿ ನಿರ್ದೇಶಕ ತಿಪ್ಪೆಸ್ವಾಮಿ ವಿ., ಬೆಳವಟಗಿ ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ರಫಿ ಮತ್ತು ಅಧಿಕಾರಿಗಳು ಈಚೆಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬೆಳೆಗೆ ಹಳದಿ ಹಾಗೂ ಬೂದು ರೋಗ ಬಂದಿದ್ದರಿಂದ ರೈತರು ಆತಂಕಗೊಂಡಿರುವ ಕುರಿತು ‘ಪ್ರಜಾವಾಣಿ’ಯಲ್ಲಿ ಜುಲೈ 28ರಂದು ‘ಹೆಸರು ಬೆಳೆಗೆ ಹಳದಿ ರೋಗ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.</p>.<p>ರಫಿ ಮಾತನಾಡಿ, ‘ನಿರಂತರವಾಗಿ ಮಳೆಯಾಗುತ್ತಿದ್ದು, ಜಮೀನಿನಲ್ಲಿ ನಿಂತ ನೀರನ್ನು ಬಸಿಗಾಲುವೆ ಮೂಲಕ ಹೊರ ಹಾಕಬೇಕು. ತಗ್ಗು ಪ್ರದೇಶಗಳಲ್ಲಿ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿದ್ದು, ಬೆಳೆ ಪುನಶ್ಚೇತನಕ್ಕೆ 13:0:45 ಗೊಬ್ಬರವನ್ನು ಪ್ರತಿ ಲೀಟರ್ ನೀರಿಗೆ 5 ಗ್ರಾಂ ಬೆರೆಸಿ ಸಿಂಪಡಣೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಹೆಸರು ಮತ್ತು ಉದ್ದು ಬೆಳೆಗಳಲ್ಲಿ ಎಲೆ ಚುಕ್ಕೆ ರೋಗ ನಿರ್ವಹಣೆಗೆ ರಾಸಾಯನಿಕ ಸಿಂಪಡಿಸಬೇಕು. ಹೆಸರು ಮತ್ತು ಉದ್ದಿನ ಬೆಳೆಗಳಲ್ಲಿ ನಂಜುರೋಗ ಕಂಡುಬಂದಲ್ಲಿ ಪ್ರಾರಂಭದ ಹಂತದಲ್ಲಿಯೇ ಸಸಿಗಳನ್ನು ಗುರುತಿಸಿ ಕಿತ್ತು ಮಣ್ಣಿನಲ್ಲಿ ಹೂಳಬೇಕು ಎಂದರು.</p>.<p>ಈ ವೇಳೆ ಕೃಷಿ ಇಲಾಖೆ ಅಧಿಕಾರಿ ಎಂ.ಕೆ.ಕಳ್ಳಿಮನಿ, ರೈತರಾದ ನಾಗಪ್ಪ ಹಳ್ಳದ, ಶಿವಾನಂದ ಹಳ್ಳದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>