<p><strong>ನವಲಗುಂದ:</strong> ‘ಒಂದೇ ಕುಟುಂಬದವರು ಜತೆಗೆ ಕುಳಿತು ಊಟ ಮಾಡಲು ಸಮಯವಿಲ್ಲದ ಈ ದಿನಗಳಲ್ಲಿ ತಾಲ್ಲೂಕಿನ ಭಕ್ತ ಸಮೂಹವೆಲ್ಲ ಸೇರಿ ಧರ್ಮದ ಬುತ್ತಿ ಹೆಸರಿನಲ್ಲಿ ಜಾತಿ, ಮತಗಳನ್ನು ಮೀರಿ ಹಿರೇಮಠಕ್ಕೆ ಬುತ್ತಿಯನ್ನು ಹೊತ್ತು ತರುವ ಮೂಲಕ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದೀರಿ’ ಎಂದು ಮಣಕವಾಡ ದೇವಮಂದಿರದ ಅಭಿನವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಪಂಚಗೃಹ ಹಿರೇಮಠದ ನೂತನ ಪೀಠಾಧಿಕಾರಿ ವೀರಬಸವ ದೇವರ ಗುರು ಪಟ್ಟಾಧಿಕಾರ ಮಹೋತ್ಸವ ಅಂಗವಾಗಿ ಭಾನುವಾರ ಆಯೋಜಿಸಿದ್ದ ಧರ್ಮದ ಬುತ್ತಿ ಜಾಥಾ ಉದ್ಘಾಟಿಸಿದ ಅವರು, ‘ಮಹೋತ್ಸವಕ್ಕಾಗಿ ಸಾವಿರಾರು ಮಹಿಳೆಯರು ರಾತ್ರಿಯಿಡೀ ಶೇಂಗಾ ಹೋಳಿಗೆ, ರೊಟ್ಟಿ ಬುತ್ತಿ ಮಾಡಿಕೊಂಡು ಬಿಸಿಲನ್ನೂ ಲೆಕ್ಕಿಸದೆ ಜಾಥಾದಲ್ಲಿ ಪಾಲ್ಗೊಂಡು ಅಧ್ಯಾತ್ಮ ಚಿಂತನೆಗೆ ಆದ್ಯತೆ ನೀಡಿರುವುದು ಹೆಮ್ಮೆಯ ಸಂಗತಿ’ ಎಂದರು.</p>.<p>ಗವಿಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ‘ಈ ಹಿಂದೆ ನಡೆದ ಎಲ್ಲ ಮಠಗಳ ಪಟ್ಟಾಧಿಕಾರ ಮಹೋತ್ಸವಗಳನ್ನೂ ಮೀರಿಸುವಂತಹ ಧಾರ್ಮಿಕ ಕಾರ್ಯಗಳು ತಾಲ್ಲೂಕಿನ ಎಲ್ಲ ಭಕ್ತರ ಸಹಕಾರದಿಂದ ಹಿರೇಮಠದಲ್ಲಿ ನಡೆದಿರುವುದು ಎಲ್ಲರನ್ನು ಭಕ್ತಿಯ ಸಾಗರದಲ್ಲಿ ಮಿಂದೇಳುವಂತೆ ಮಾಡಿದೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>ಧರ್ಮದ ಬುತ್ತಿ ಜಾಥಾದಲ್ಲಿ ಐದು ಸಾವಿರಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು. ಮಹಿಳೆಯರು, ಮಕ್ಕಳು ಸಾಂಪ್ರದಾಯಿಕ ಉಡುಗೆ ತೊಟ್ಟು, ರಾಷ್ಟ್ರಧ್ವಜ ಹೋಲುವ ಕೇಸರಿ, ಬಿಳಿ, ಹಸಿರು ಬಟ್ಟೆಗಳಲ್ಲಿ ಬುತ್ತಿ ಬುಟ್ಟಿ ಕಟ್ಟಿಕೊಂಡು ಮೆರವಣೆಗೆಯಲ್ಲಿಸಾಗಿದರು.</p>.<p>ಶ್ರೀ ಶಂಕರ ಕಾಲೇಜು ಮೈದಾನದಲ್ಲಿ ಧರ್ಮದ ಬುತ್ತಿ ಜಾಥಾಕ್ಕೆ ಪಂಚಗ್ರಹ ಹಿರೇಮಠದ ಸಿದ್ಧೇಶ್ವರ ಶಿವಾಚಾರ್ಯರ ಸಾನ್ನಿಧ್ಯದಲ್ಲಿನರಗುಂದ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯರು, ನಿಯೋಜಿತ ಪೀಠಾಧಿಕಾರಿ ವೀರಬಸವ ಸ್ವಾಮೀಜಿ, ಶಾಸಕ ಎನ್.ಎಚ್. ಕೋನರಡ್ಡಿ, ಬಿಜೆಪಿ ಮುಖಂಡ ಶಂಕರ ಪಾಟೀಲ್ ಮುನೇನಕೊಪ್ಪ ಚಾಲನೆ ನೀಡಿದರು.</p>.<p>ಅಣ್ಣಪ್ಪ ಬಾಗಿ, ಪಾಂಡಪ್ಪ ಕೋನರಡ್ಡಿ, ಸಿದ್ದಲಿಂಗಯ್ಯ ಹಿರೇಮಠ, ಶಿವಾಜಿ ಕಲಾಲ, ಯಲ್ಲಪ್ಪ ಭೋವಿ, ಮಹೇಶ ಹಳ್ಳದ, ಬಾಬು ಹಳ್ಳದ, ಅಡಿವೆಪ್ಪ ಶಿರಸಂಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-24-1722827346</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ‘ಒಂದೇ ಕುಟುಂಬದವರು ಜತೆಗೆ ಕುಳಿತು ಊಟ ಮಾಡಲು ಸಮಯವಿಲ್ಲದ ಈ ದಿನಗಳಲ್ಲಿ ತಾಲ್ಲೂಕಿನ ಭಕ್ತ ಸಮೂಹವೆಲ್ಲ ಸೇರಿ ಧರ್ಮದ ಬುತ್ತಿ ಹೆಸರಿನಲ್ಲಿ ಜಾತಿ, ಮತಗಳನ್ನು ಮೀರಿ ಹಿರೇಮಠಕ್ಕೆ ಬುತ್ತಿಯನ್ನು ಹೊತ್ತು ತರುವ ಮೂಲಕ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದೀರಿ’ ಎಂದು ಮಣಕವಾಡ ದೇವಮಂದಿರದ ಅಭಿನವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಪಂಚಗೃಹ ಹಿರೇಮಠದ ನೂತನ ಪೀಠಾಧಿಕಾರಿ ವೀರಬಸವ ದೇವರ ಗುರು ಪಟ್ಟಾಧಿಕಾರ ಮಹೋತ್ಸವ ಅಂಗವಾಗಿ ಭಾನುವಾರ ಆಯೋಜಿಸಿದ್ದ ಧರ್ಮದ ಬುತ್ತಿ ಜಾಥಾ ಉದ್ಘಾಟಿಸಿದ ಅವರು, ‘ಮಹೋತ್ಸವಕ್ಕಾಗಿ ಸಾವಿರಾರು ಮಹಿಳೆಯರು ರಾತ್ರಿಯಿಡೀ ಶೇಂಗಾ ಹೋಳಿಗೆ, ರೊಟ್ಟಿ ಬುತ್ತಿ ಮಾಡಿಕೊಂಡು ಬಿಸಿಲನ್ನೂ ಲೆಕ್ಕಿಸದೆ ಜಾಥಾದಲ್ಲಿ ಪಾಲ್ಗೊಂಡು ಅಧ್ಯಾತ್ಮ ಚಿಂತನೆಗೆ ಆದ್ಯತೆ ನೀಡಿರುವುದು ಹೆಮ್ಮೆಯ ಸಂಗತಿ’ ಎಂದರು.</p>.<p>ಗವಿಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ‘ಈ ಹಿಂದೆ ನಡೆದ ಎಲ್ಲ ಮಠಗಳ ಪಟ್ಟಾಧಿಕಾರ ಮಹೋತ್ಸವಗಳನ್ನೂ ಮೀರಿಸುವಂತಹ ಧಾರ್ಮಿಕ ಕಾರ್ಯಗಳು ತಾಲ್ಲೂಕಿನ ಎಲ್ಲ ಭಕ್ತರ ಸಹಕಾರದಿಂದ ಹಿರೇಮಠದಲ್ಲಿ ನಡೆದಿರುವುದು ಎಲ್ಲರನ್ನು ಭಕ್ತಿಯ ಸಾಗರದಲ್ಲಿ ಮಿಂದೇಳುವಂತೆ ಮಾಡಿದೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>ಧರ್ಮದ ಬುತ್ತಿ ಜಾಥಾದಲ್ಲಿ ಐದು ಸಾವಿರಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು. ಮಹಿಳೆಯರು, ಮಕ್ಕಳು ಸಾಂಪ್ರದಾಯಿಕ ಉಡುಗೆ ತೊಟ್ಟು, ರಾಷ್ಟ್ರಧ್ವಜ ಹೋಲುವ ಕೇಸರಿ, ಬಿಳಿ, ಹಸಿರು ಬಟ್ಟೆಗಳಲ್ಲಿ ಬುತ್ತಿ ಬುಟ್ಟಿ ಕಟ್ಟಿಕೊಂಡು ಮೆರವಣೆಗೆಯಲ್ಲಿಸಾಗಿದರು.</p>.<p>ಶ್ರೀ ಶಂಕರ ಕಾಲೇಜು ಮೈದಾನದಲ್ಲಿ ಧರ್ಮದ ಬುತ್ತಿ ಜಾಥಾಕ್ಕೆ ಪಂಚಗ್ರಹ ಹಿರೇಮಠದ ಸಿದ್ಧೇಶ್ವರ ಶಿವಾಚಾರ್ಯರ ಸಾನ್ನಿಧ್ಯದಲ್ಲಿನರಗುಂದ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯರು, ನಿಯೋಜಿತ ಪೀಠಾಧಿಕಾರಿ ವೀರಬಸವ ಸ್ವಾಮೀಜಿ, ಶಾಸಕ ಎನ್.ಎಚ್. ಕೋನರಡ್ಡಿ, ಬಿಜೆಪಿ ಮುಖಂಡ ಶಂಕರ ಪಾಟೀಲ್ ಮುನೇನಕೊಪ್ಪ ಚಾಲನೆ ನೀಡಿದರು.</p>.<p>ಅಣ್ಣಪ್ಪ ಬಾಗಿ, ಪಾಂಡಪ್ಪ ಕೋನರಡ್ಡಿ, ಸಿದ್ದಲಿಂಗಯ್ಯ ಹಿರೇಮಠ, ಶಿವಾಜಿ ಕಲಾಲ, ಯಲ್ಲಪ್ಪ ಭೋವಿ, ಮಹೇಶ ಹಳ್ಳದ, ಬಾಬು ಹಳ್ಳದ, ಅಡಿವೆಪ್ಪ ಶಿರಸಂಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-24-1722827346</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>