<p>ನವಲಗುಂದ: ‘ರಕ್ತದಾನ, ಮಹಾದಾನ. ರಕ್ತದಾನದಿಂದ ಆರೋಗ್ಯ ವೃದ್ಧಿಯಾಗುತ್ತದೆ. ಆರೋಗ್ಯವಂತರು ರಕ್ತದಾನ ಮಾಡಬೇಕು’ ಎಂದು ಹುಬ್ಬಳ್ಳಿಯ ರೋಟರಿ ಬ್ಲಡ್ ಬ್ಯಾಂಕ್ನ ತಾಂತ್ರಿಕ ನಿರ್ದೇಶಕರಾದ ರಾಧಿಕಾ ಆಪ್ಟೆ ಹೇಳಿದರು.</p>.<p>ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಭಾರತೀಯ ರೆಡ್ಕ್ರಾಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಎಸ್ಎಸ್ ಹಾಗೂ ಧಾರವಾಡದ ರೋಟರಿ ಬ್ಲಡ್ ಬ್ಯಾಂಕ್ ಸಂಯುಕ್ತಾಶ್ರಯದಲ್ಲಿ ಬುಧವಾರ ಏರ್ಪಡಿಸಿದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.</p>.<p>ಪ್ರಾಂಶುಪಾಲ ಎಂ.ಬಿ.ಬಾಗಡಿ ಮಾತನಾಡಿ, ‘ಅರ್ಹತೆ ಇರುವ ಎಲ್ಲ ವಿದ್ಯಾರ್ಥಿಗಳು ರಕ್ತದಾನ ಮಾಡುವ ಮುಖಾಂತರ ರೋಗಿಗಳಿಗೆ ನೆರವಾಗಬೇಕು’ ಎಂದರು.</p>.<p>ಸಿಪಿಐ ರವಿಕುಮಾರ ಕಪ್ಪತ್ತಣ್ಣವರ, ಪಿಎಸ್ಐ ಜನಾರ್ದನ್ ಭಟ್ರಳ್ಳಿ ಹಾಗೂ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ 40 ಯೂನಿಟ್ ರಕ್ತದಾನ ಮಾಡಿದರು.</p>.<p>ಗಣೇಶ್ ಧೋoಗಡಿ, ಗಂಗಾಧರ ಗೌಡರ, ಪ್ರಸನ್ನ ಪಂಢರಿ, ಶ್ರೀಧರ ಲೋನಕರ್, ರವಿ ಬ್ಯಾಹಟ್ಟಿ, ಮಧು ಹುಣಸಗಿ, ಸುಜಾತಾ ಬರದೂರ, ಪ್ರಹತ್ ತಂದೂರ್, ವಸಂತ ಮುಂದಿನಮನಿ, ಜ್ಯೋತಿಭಾ ದೊಡಮನಿ, ಭಾರತಿ ಭೋವಿ, ಸುರೇಶ ಬಾರಕೇರ,ಶ್ರೀಧರ ಕಲ್ಲೂರ, ಸವಿತಾ ಚಿಕ್ಕಣ್ಣವರ, ಸಂತೋಷ ಹುಬ್ಬಳ್ಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-24-1397853305</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವಲಗುಂದ: ‘ರಕ್ತದಾನ, ಮಹಾದಾನ. ರಕ್ತದಾನದಿಂದ ಆರೋಗ್ಯ ವೃದ್ಧಿಯಾಗುತ್ತದೆ. ಆರೋಗ್ಯವಂತರು ರಕ್ತದಾನ ಮಾಡಬೇಕು’ ಎಂದು ಹುಬ್ಬಳ್ಳಿಯ ರೋಟರಿ ಬ್ಲಡ್ ಬ್ಯಾಂಕ್ನ ತಾಂತ್ರಿಕ ನಿರ್ದೇಶಕರಾದ ರಾಧಿಕಾ ಆಪ್ಟೆ ಹೇಳಿದರು.</p>.<p>ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಭಾರತೀಯ ರೆಡ್ಕ್ರಾಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಎಸ್ಎಸ್ ಹಾಗೂ ಧಾರವಾಡದ ರೋಟರಿ ಬ್ಲಡ್ ಬ್ಯಾಂಕ್ ಸಂಯುಕ್ತಾಶ್ರಯದಲ್ಲಿ ಬುಧವಾರ ಏರ್ಪಡಿಸಿದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.</p>.<p>ಪ್ರಾಂಶುಪಾಲ ಎಂ.ಬಿ.ಬಾಗಡಿ ಮಾತನಾಡಿ, ‘ಅರ್ಹತೆ ಇರುವ ಎಲ್ಲ ವಿದ್ಯಾರ್ಥಿಗಳು ರಕ್ತದಾನ ಮಾಡುವ ಮುಖಾಂತರ ರೋಗಿಗಳಿಗೆ ನೆರವಾಗಬೇಕು’ ಎಂದರು.</p>.<p>ಸಿಪಿಐ ರವಿಕುಮಾರ ಕಪ್ಪತ್ತಣ್ಣವರ, ಪಿಎಸ್ಐ ಜನಾರ್ದನ್ ಭಟ್ರಳ್ಳಿ ಹಾಗೂ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ 40 ಯೂನಿಟ್ ರಕ್ತದಾನ ಮಾಡಿದರು.</p>.<p>ಗಣೇಶ್ ಧೋoಗಡಿ, ಗಂಗಾಧರ ಗೌಡರ, ಪ್ರಸನ್ನ ಪಂಢರಿ, ಶ್ರೀಧರ ಲೋನಕರ್, ರವಿ ಬ್ಯಾಹಟ್ಟಿ, ಮಧು ಹುಣಸಗಿ, ಸುಜಾತಾ ಬರದೂರ, ಪ್ರಹತ್ ತಂದೂರ್, ವಸಂತ ಮುಂದಿನಮನಿ, ಜ್ಯೋತಿಭಾ ದೊಡಮನಿ, ಭಾರತಿ ಭೋವಿ, ಸುರೇಶ ಬಾರಕೇರ,ಶ್ರೀಧರ ಕಲ್ಲೂರ, ಸವಿತಾ ಚಿಕ್ಕಣ್ಣವರ, ಸಂತೋಷ ಹುಬ್ಬಳ್ಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-24-1397853305</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>