<p>ನವಲಗುಂದ: ‘ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ ಅಧ್ಯಾತ್ಮ ಪ್ರವಚನದ ಮೂಲಕ ಭಕ್ತರಿಗೆ ಸನ್ಮಾರ್ಗದ ಸಂದೇಶ ನೀಡುತ್ತಿದ್ದಾರೆ’ ಎಂದು ಪಂಚಗ್ರಹ ಹಿರೇಮಠದ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಪಂಚಗ್ರಹ ಹಿರೇಮಠದ ಗುರುಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಪ್ರವಚನ ಕಾರ್ಯಕ್ರಮದಲ್ಲಿ ನಡೆದ ಅಭಿನವ ಮೃತ್ಯುಂಜಯ ಸ್ವಾಮೀಜಿಯವರ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಗವಿಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ‘ಮಣಕವಾಡ ಶ್ರೀ ಪ್ರವಚನದ ಮೂಲಕ ಅಧ್ಯಾತ್ಮ ಜ್ಞಾನ ಪಸರಿಸುತ್ತಿದ್ದಾರೆ’ ಎಂದರು.</p>.<p>ಶಾಸಕ ಎನ್.ಎಚ್.ಕೋನರಡ್ಡಿ ಮಾತನಾಡಿದರು. ಪ್ರವಚನದ ಜತೆಗೆ ಪ್ರತಿ ದಿನ ಬೆಳಗಿನ ಜಾವ ಪಟ್ಟಣದಲ್ಲಿ ಸಂಚರಿಸಿ ಚಟ ಮುಕ್ತ ಹಾಗೂ ಸ್ವಚ್ಛತಾ ಅಭಿಯಾನ ನಡೆಸಲಾಗುತ್ತಿದೆ. ಪ್ರತಿ ದಿನ ಪ್ರವಚನ ಮುಕ್ತಾಯ ಸಂದರ್ಭದಲ್ಲಿ ಮಹಾ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.</p>.<p>ಹಿರೇಮಠದ ನಿಯೋಜಿತ ಪಿಠಾಧಿಕಾರಿ ವೀರಬಸವ ದೇವರು, ಅಣ್ಣಪ್ಪ ಬಾಗಿ, ಸಿದ್ಧಲಿಂಗಯ್ಯ ಹಿರೇಮಠ, ಎಂ.ಡಿ.ಕುಲಕರ್ಣಿ, ಶ್ರೀಶೈಲ ಮೂಲಿಮನಿ, ಗಂಗಪ್ಪ ಹಳ್ಳದ, ಪಾಂಡಪ್ಪ ಕೋನರಡ್ಡಿ, ಮಲ್ಲಿಕಾರ್ಜುನ ಜಲಾದಿ, ಯಲ್ಲಪ್ಪ ಭೋವಿ, ಅಪ್ಪಣ್ಣ ಹಳ್ಳದ, ಬಸವರಾಜ ಈಟಿ, ಸಿದ್ದಲಿಂಗಪ್ಪ ಹಳ್ಳದ, ಎ.ಬಿ.ಕೊಪ್ಪದ, ಆರ್.ಎಸ್.ನೇಗಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-24-354463808</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವಲಗುಂದ: ‘ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ ಅಧ್ಯಾತ್ಮ ಪ್ರವಚನದ ಮೂಲಕ ಭಕ್ತರಿಗೆ ಸನ್ಮಾರ್ಗದ ಸಂದೇಶ ನೀಡುತ್ತಿದ್ದಾರೆ’ ಎಂದು ಪಂಚಗ್ರಹ ಹಿರೇಮಠದ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಪಂಚಗ್ರಹ ಹಿರೇಮಠದ ಗುರುಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಪ್ರವಚನ ಕಾರ್ಯಕ್ರಮದಲ್ಲಿ ನಡೆದ ಅಭಿನವ ಮೃತ್ಯುಂಜಯ ಸ್ವಾಮೀಜಿಯವರ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಗವಿಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ‘ಮಣಕವಾಡ ಶ್ರೀ ಪ್ರವಚನದ ಮೂಲಕ ಅಧ್ಯಾತ್ಮ ಜ್ಞಾನ ಪಸರಿಸುತ್ತಿದ್ದಾರೆ’ ಎಂದರು.</p>.<p>ಶಾಸಕ ಎನ್.ಎಚ್.ಕೋನರಡ್ಡಿ ಮಾತನಾಡಿದರು. ಪ್ರವಚನದ ಜತೆಗೆ ಪ್ರತಿ ದಿನ ಬೆಳಗಿನ ಜಾವ ಪಟ್ಟಣದಲ್ಲಿ ಸಂಚರಿಸಿ ಚಟ ಮುಕ್ತ ಹಾಗೂ ಸ್ವಚ್ಛತಾ ಅಭಿಯಾನ ನಡೆಸಲಾಗುತ್ತಿದೆ. ಪ್ರತಿ ದಿನ ಪ್ರವಚನ ಮುಕ್ತಾಯ ಸಂದರ್ಭದಲ್ಲಿ ಮಹಾ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.</p>.<p>ಹಿರೇಮಠದ ನಿಯೋಜಿತ ಪಿಠಾಧಿಕಾರಿ ವೀರಬಸವ ದೇವರು, ಅಣ್ಣಪ್ಪ ಬಾಗಿ, ಸಿದ್ಧಲಿಂಗಯ್ಯ ಹಿರೇಮಠ, ಎಂ.ಡಿ.ಕುಲಕರ್ಣಿ, ಶ್ರೀಶೈಲ ಮೂಲಿಮನಿ, ಗಂಗಪ್ಪ ಹಳ್ಳದ, ಪಾಂಡಪ್ಪ ಕೋನರಡ್ಡಿ, ಮಲ್ಲಿಕಾರ್ಜುನ ಜಲಾದಿ, ಯಲ್ಲಪ್ಪ ಭೋವಿ, ಅಪ್ಪಣ್ಣ ಹಳ್ಳದ, ಬಸವರಾಜ ಈಟಿ, ಸಿದ್ದಲಿಂಗಪ್ಪ ಹಳ್ಳದ, ಎ.ಬಿ.ಕೊಪ್ಪದ, ಆರ್.ಎಸ್.ನೇಗಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-24-354463808</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>