<p>ನವಲಗುಂದ: ‘ಪಟ್ಟಣದಲ್ಲಿನ ಒತ್ತುವರಿಯಾಗಿರುವ ರಸ್ತೆಗಳನ್ನು ತಕ್ಷಣ ತೆರವುಗೊಳಿಸಲು ಪುರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಎನ್.ಎಚ್.ಕೋನರಡ್ಡಿ ತಿಳಿಸಿದರು.</p>.<p>ಪಟ್ಟಣದ ಸುಕ್ಷೇತ್ರ ಸಂಸ್ಥಾನ ಪಂಚಗ್ರಹ ಹಿರೇಮಠದ ನೂತನ ಪೀಠಾಧಿಪತಿ ವೀರಬಸವ ದೇವರ ಗುರುಪಟ್ಟಾಭಿಷೇಕದ ಅಂಗವಾಗಿ ಪುರಸಭೆಯ ಸಹಭಾಗಿತ್ವದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ನಮ್ಮ ನಡೆ ಸ್ವಚ್ಛತೆ ಕಡೆ’ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಇಂದೋರ್ ನಗರದ ಮಾದರಿಯಲ್ಲಿ ನವಲಗುಂದವೂ ಸ್ವಚ್ಛ ನಗರವಾಗಿ ರೂಪುಗೊಳ್ಳಬೇಕು. ‘ಪಟ್ಟಣವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ವಾರದಲ್ಲಿ ಕನಿಷ್ಠ ಒಂದು ದಿನ, ಪ್ರತಿ ಓಣಿಯನ್ನು ಸ್ವಚ್ಛಗೊಳಿಸುವಂತೆ ಪುರಸಭೆ ಕ್ರಮ ಕೈಗೊಳ್ಳಬೇಕು ಹಾಗೂ ಈ ಕಾರ್ಯದಲ್ಲಿ ಸಾರ್ವಜನಿಕರೂ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>ಪಂಚಗೃಹ ಹಿರೇಮಠದ ನೂತನ ಪೀಠಾಧಿಕಾರಿ ವೀರಬಸವ ದೇವರು ಮಾತನಾಡಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಎಸ್.ಪಿ.ಪೂಜಾರ, ವಿ.ಪಿ. ಪಾಟೀಲ, ಜೀವನ ಪವಾರ, ಮೋದಿನ ಶಿರೂರ, ಪ್ರಕಾಶ ಶಿಗ್ಲಿ, ಮುಖಂಡರಾದ ಗಂಗಪ್ಪ ಹಳ್ಳದ, ಎಸ್.ಕೆ.ದೋಟಿಕಲ, ಶಂಕ್ರಯ್ಯ ಸುಬಬೇದಾರಮಠ, ಶಿದ್ದಲಿಂಗಯ್ಯ ಹಿರೇಮಠ ಹಾಗೂ ಪ್ರಮುಖರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-24-323527654</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವಲಗುಂದ: ‘ಪಟ್ಟಣದಲ್ಲಿನ ಒತ್ತುವರಿಯಾಗಿರುವ ರಸ್ತೆಗಳನ್ನು ತಕ್ಷಣ ತೆರವುಗೊಳಿಸಲು ಪುರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಎನ್.ಎಚ್.ಕೋನರಡ್ಡಿ ತಿಳಿಸಿದರು.</p>.<p>ಪಟ್ಟಣದ ಸುಕ್ಷೇತ್ರ ಸಂಸ್ಥಾನ ಪಂಚಗ್ರಹ ಹಿರೇಮಠದ ನೂತನ ಪೀಠಾಧಿಪತಿ ವೀರಬಸವ ದೇವರ ಗುರುಪಟ್ಟಾಭಿಷೇಕದ ಅಂಗವಾಗಿ ಪುರಸಭೆಯ ಸಹಭಾಗಿತ್ವದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ನಮ್ಮ ನಡೆ ಸ್ವಚ್ಛತೆ ಕಡೆ’ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಇಂದೋರ್ ನಗರದ ಮಾದರಿಯಲ್ಲಿ ನವಲಗುಂದವೂ ಸ್ವಚ್ಛ ನಗರವಾಗಿ ರೂಪುಗೊಳ್ಳಬೇಕು. ‘ಪಟ್ಟಣವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ವಾರದಲ್ಲಿ ಕನಿಷ್ಠ ಒಂದು ದಿನ, ಪ್ರತಿ ಓಣಿಯನ್ನು ಸ್ವಚ್ಛಗೊಳಿಸುವಂತೆ ಪುರಸಭೆ ಕ್ರಮ ಕೈಗೊಳ್ಳಬೇಕು ಹಾಗೂ ಈ ಕಾರ್ಯದಲ್ಲಿ ಸಾರ್ವಜನಿಕರೂ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>ಪಂಚಗೃಹ ಹಿರೇಮಠದ ನೂತನ ಪೀಠಾಧಿಕಾರಿ ವೀರಬಸವ ದೇವರು ಮಾತನಾಡಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಎಸ್.ಪಿ.ಪೂಜಾರ, ವಿ.ಪಿ. ಪಾಟೀಲ, ಜೀವನ ಪವಾರ, ಮೋದಿನ ಶಿರೂರ, ಪ್ರಕಾಶ ಶಿಗ್ಲಿ, ಮುಖಂಡರಾದ ಗಂಗಪ್ಪ ಹಳ್ಳದ, ಎಸ್.ಕೆ.ದೋಟಿಕಲ, ಶಂಕ್ರಯ್ಯ ಸುಬಬೇದಾರಮಠ, ಶಿದ್ದಲಿಂಗಯ್ಯ ಹಿರೇಮಠ ಹಾಗೂ ಪ್ರಮುಖರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-24-323527654</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>