<p><strong>ನವಲಗುಂದ</strong>: ‘ವಿದ್ಯಾರ್ಥಿಗಳ ಜೀವನ ಸ್ಪರ್ಧಾತ್ಮಕತೆಯೊಂದಿಗೆ ಮೌಲ್ಯಯುತ ಶಿಕ್ಷಣದ ಅಗತ್ಯವಿದೆ. ಹೊಸತನದ ಶಿಕ್ಷಣದ ಜೊತೆಗೆ ಅವರಲ್ಲಿ ರಾಷ್ಟ್ರಭಕ್ತಿ ತುಂಬಿ ಸಿದ್ಧಗೊಳಿಸಬೇಕಾಗಿದೆ‘ ಎಂದು – ಹೇಳಿದರು.</p>.<p>ಸ್ಥಳೀಯ ವಿಶ್ವವಿಜೇತ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶಾಲೆ ಶಾಲಾ ವಾರ್ಷಿಕೋತ್ಸವವನ್ನು ಗಣ್ಯರೊಂದಿಗೆ ಸೋಮವಾರ ಉದ್ಘಾಟಿಸಿ ಮಾತನಾಡಿದರು.</p>.<p>ಮುಖ್ಯ ಅತಿಥಿ ಸುಹಾಸ ಆನೇಗುಂದಿ ಮಾತನಾಡಿ, ಮಕ್ಕಳಲ್ಲಿ ದೇಶಪ್ರೇಮ ಬೆಳೆಸಿ, ಗುರು ಹಿರಿಯರನ್ನು ಗೌರವಿಸುವ ಪರಂಪರೆ ಬೆಳೆಸುವಲ್ಲಿ ಈ ಶಾಲೆಯ ಕೊಡುಗೆ ಗಮನಾರ್ಹವಾಗಿದೆ ಎಂದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಸೆನಟ್ ಸದಸ್ಯ ಜಯಪ್ರಕಾಶ ಬಾದಾಮಿ ಹಾಗೂ ವೈದ್ಯ ಬಿ.ಎಲ್.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಭಾರತೀಯ ಪರಂಪರೆಯ ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಬರುವಂತಹ ವಾತಾವರಣ ಈ ಶಾಲೆಯಲ್ಲಿದೆ ಎಂದರು.</p>.<p>ಆನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪುರಸಭೆಯ ಮಾಜಿ ಸದಸ್ಯ ನಿಂಗಪ್ಪ ಸುಳ್ಳದ ಅಧ್ಯಕ್ಷತೆ ವಹಿಸಿದ್ದರು. ಗಣ್ಯರಾದ ನಾಗಪ್ಪ ತೋಟಪ್ಪನವರ, ಸ್ವಪ್ನಾ ಸರ್ವದೆ, ಮಂಜುಳಾ ಕೊಟಗಿ, ನಿಂಗಪ್ಪ ಕುಂಬಾರ, ಶಿವಲೀಲಾ ತೋಟಪ್ಪನವರ ಹಾಗೂ ಶಾಲಾ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ‘ವಿದ್ಯಾರ್ಥಿಗಳ ಜೀವನ ಸ್ಪರ್ಧಾತ್ಮಕತೆಯೊಂದಿಗೆ ಮೌಲ್ಯಯುತ ಶಿಕ್ಷಣದ ಅಗತ್ಯವಿದೆ. ಹೊಸತನದ ಶಿಕ್ಷಣದ ಜೊತೆಗೆ ಅವರಲ್ಲಿ ರಾಷ್ಟ್ರಭಕ್ತಿ ತುಂಬಿ ಸಿದ್ಧಗೊಳಿಸಬೇಕಾಗಿದೆ‘ ಎಂದು – ಹೇಳಿದರು.</p>.<p>ಸ್ಥಳೀಯ ವಿಶ್ವವಿಜೇತ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶಾಲೆ ಶಾಲಾ ವಾರ್ಷಿಕೋತ್ಸವವನ್ನು ಗಣ್ಯರೊಂದಿಗೆ ಸೋಮವಾರ ಉದ್ಘಾಟಿಸಿ ಮಾತನಾಡಿದರು.</p>.<p>ಮುಖ್ಯ ಅತಿಥಿ ಸುಹಾಸ ಆನೇಗುಂದಿ ಮಾತನಾಡಿ, ಮಕ್ಕಳಲ್ಲಿ ದೇಶಪ್ರೇಮ ಬೆಳೆಸಿ, ಗುರು ಹಿರಿಯರನ್ನು ಗೌರವಿಸುವ ಪರಂಪರೆ ಬೆಳೆಸುವಲ್ಲಿ ಈ ಶಾಲೆಯ ಕೊಡುಗೆ ಗಮನಾರ್ಹವಾಗಿದೆ ಎಂದರು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಸೆನಟ್ ಸದಸ್ಯ ಜಯಪ್ರಕಾಶ ಬಾದಾಮಿ ಹಾಗೂ ವೈದ್ಯ ಬಿ.ಎಲ್.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಭಾರತೀಯ ಪರಂಪರೆಯ ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಬರುವಂತಹ ವಾತಾವರಣ ಈ ಶಾಲೆಯಲ್ಲಿದೆ ಎಂದರು.</p>.<p>ಆನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪುರಸಭೆಯ ಮಾಜಿ ಸದಸ್ಯ ನಿಂಗಪ್ಪ ಸುಳ್ಳದ ಅಧ್ಯಕ್ಷತೆ ವಹಿಸಿದ್ದರು. ಗಣ್ಯರಾದ ನಾಗಪ್ಪ ತೋಟಪ್ಪನವರ, ಸ್ವಪ್ನಾ ಸರ್ವದೆ, ಮಂಜುಳಾ ಕೊಟಗಿ, ನಿಂಗಪ್ಪ ಕುಂಬಾರ, ಶಿವಲೀಲಾ ತೋಟಪ್ಪನವರ ಹಾಗೂ ಶಾಲಾ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>