<p>ನವಲಗುಂದ: ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಗರ್ಭಿಣಿ ಮಾನ್ಯ ಪಾಟೀಲ ಮರ್ಯಾದೆಗೇಡು ಹತ್ಯೆ ಖಂಡಿಸಿ ಹಾಗೂ ಈ ಘಟನೆಯಲ್ಲಿ ಅಮಾಯಕ ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಆರೋಪಿಸಿ ಗ್ರಾಮದಲ್ಲಿನ ನೀರಿನ ಟ್ಯಾಂಕ್ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ಗ್ರಾಮದಲ್ಲಿ ನಡೆದಿದೆ.</p>.<p>ತಾಲ್ಲೂಕಿನ ಭೋಗಾನೂರ ಗ್ರಾಮದ ಮಹದೇವ ಬಾಗೂರ ಆತ್ಯಹತ್ಯೆಗೆ ಯತ್ನಿಸಿದರು. ಸಮಯ ಪ್ರಜ್ಞೆ ಮೆರೆದ ನವಲಗುಂದ ಪೊಲೀಸ್ ಠಾಣಿ ಸಿಬ್ಬಂದಿ ಯುವಕನ ಮನವೊಲಿಸಿ ಪ್ರಾಣ ಉಳಿಸುವಲ್ಲಿ ಯಶಸ್ವಿಯಾದರು.</p>.<p>ಹತ್ಯೆ ಖಂಡಿಸಿ ಶುಕ್ರವಾರ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದ ಯುವಕ ಶನಿವಾರ ಮದ್ಯಾಹ್ನ 4 ಗಂಟೆಗೆ ಏಕಾಏಕಿ ಗ್ರಾಮದಲ್ಲಿನ ನೀರಿನ ಟ್ಯಾಂಕರ್ ಏರಿ ಮಹಿಳೆಯ ಹತ್ಯೆಗೆ ಸರ್ಕಾರ ವಿಶೇಷ ತಂಡ ರಚಿಸಿ ಎಲ್ಲ ಆರೋಪಿಗಳನ್ನು ಬಂಧಿಸಿ ಮೃತಳ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು’ ಎಂಬ ಬೇಡಿಕೆಯನ್ನು ಇಟ್ಟುಕೊಂಡು ಟ್ಯಾಂಕ್ ಏರಿದ್ದರು. </p>.<p>ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸ್ಐ ಜನಾರ್ಧನ ಭಟ್ರಳ್ಳಿ, ಗ್ರಾಮಸ್ಥರಾದ ಅಶೋಕ ನೀಲಪ್ಪ ಮಾದಾರ, ಗಿರೀಶ ಮಾದರ, ಮಹಾರುದ್ರಪ್ಪ ಕುಂಬಾರ, ರುದ್ರಪ್ಪ ಕುಲಕರ್ಣಿ, ಶೇಕಪ್ಪ ಮಾದರ, ಭರಮಪ್ಪ ಪೂಜಾರ, ಸೇರಿದಂತೆ ಗ್ರಾಮಸ್ಥರು ಪೊಲೀಸ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಮನವೊಲಿಸಿದರು.</p>.<p>‘ಬಸವಣ್ಣನವರು ಅಂತರ್ಜಾಜಾತಿ ವಿವಾಹ ಮಾಡಿ ಜಾತೀಯತೆ ಹೋಗಲಾಡಿಸಲು ಅಡಿಪಾಯ ಹಾಕಿದ್ದರು. ಇಂದಿಗೂ ಮೇಲ್ಜಾತಿಯವರ ಅಟ್ಟಹಾಸ, ಜಾತಿ ತಾರತಮ್ಯ, ಜಾತಿ ದ್ವೇಷ, ಅಸ್ಪೃಶ್ಯತೆ, ದಲಿತರನ್ನು ಒಪ್ಪಿಕೊಳ್ಳಲಾಗದಂತ ಮನಸ್ಥಿತಿ ಆಳವಾಗಿದೆ ಎಂಬುವುದಕ್ಕೆ ಈ ಘಟನೆ ಸಾಕ್ಷಿಯಾಗಿದ್ದು, ಹತ್ಯೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಮಹದೇವ ಬಾಗೂರ ಪ್ರಜಾವಾಣಿಗೆ ತಿಳಿಸಿದರು.</p>.<p>‘ಮಹದೇವ ಬಾಗೂರ ಅವರ ಮನವೊಲಿಸಿ ಸದ್ಯ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲಾಗಿದೆ’ ಎಂದು ಸಿಪಿಐ ರವಿಕುಮಾರ ಕಪ್ಪತ್ತನವರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವಲಗುಂದ: ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಗರ್ಭಿಣಿ ಮಾನ್ಯ ಪಾಟೀಲ ಮರ್ಯಾದೆಗೇಡು ಹತ್ಯೆ ಖಂಡಿಸಿ ಹಾಗೂ ಈ ಘಟನೆಯಲ್ಲಿ ಅಮಾಯಕ ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಆರೋಪಿಸಿ ಗ್ರಾಮದಲ್ಲಿನ ನೀರಿನ ಟ್ಯಾಂಕ್ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ಗ್ರಾಮದಲ್ಲಿ ನಡೆದಿದೆ.</p>.<p>ತಾಲ್ಲೂಕಿನ ಭೋಗಾನೂರ ಗ್ರಾಮದ ಮಹದೇವ ಬಾಗೂರ ಆತ್ಯಹತ್ಯೆಗೆ ಯತ್ನಿಸಿದರು. ಸಮಯ ಪ್ರಜ್ಞೆ ಮೆರೆದ ನವಲಗುಂದ ಪೊಲೀಸ್ ಠಾಣಿ ಸಿಬ್ಬಂದಿ ಯುವಕನ ಮನವೊಲಿಸಿ ಪ್ರಾಣ ಉಳಿಸುವಲ್ಲಿ ಯಶಸ್ವಿಯಾದರು.</p>.<p>ಹತ್ಯೆ ಖಂಡಿಸಿ ಶುಕ್ರವಾರ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದ ಯುವಕ ಶನಿವಾರ ಮದ್ಯಾಹ್ನ 4 ಗಂಟೆಗೆ ಏಕಾಏಕಿ ಗ್ರಾಮದಲ್ಲಿನ ನೀರಿನ ಟ್ಯಾಂಕರ್ ಏರಿ ಮಹಿಳೆಯ ಹತ್ಯೆಗೆ ಸರ್ಕಾರ ವಿಶೇಷ ತಂಡ ರಚಿಸಿ ಎಲ್ಲ ಆರೋಪಿಗಳನ್ನು ಬಂಧಿಸಿ ಮೃತಳ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು’ ಎಂಬ ಬೇಡಿಕೆಯನ್ನು ಇಟ್ಟುಕೊಂಡು ಟ್ಯಾಂಕ್ ಏರಿದ್ದರು. </p>.<p>ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸ್ಐ ಜನಾರ್ಧನ ಭಟ್ರಳ್ಳಿ, ಗ್ರಾಮಸ್ಥರಾದ ಅಶೋಕ ನೀಲಪ್ಪ ಮಾದಾರ, ಗಿರೀಶ ಮಾದರ, ಮಹಾರುದ್ರಪ್ಪ ಕುಂಬಾರ, ರುದ್ರಪ್ಪ ಕುಲಕರ್ಣಿ, ಶೇಕಪ್ಪ ಮಾದರ, ಭರಮಪ್ಪ ಪೂಜಾರ, ಸೇರಿದಂತೆ ಗ್ರಾಮಸ್ಥರು ಪೊಲೀಸ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಮನವೊಲಿಸಿದರು.</p>.<p>‘ಬಸವಣ್ಣನವರು ಅಂತರ್ಜಾಜಾತಿ ವಿವಾಹ ಮಾಡಿ ಜಾತೀಯತೆ ಹೋಗಲಾಡಿಸಲು ಅಡಿಪಾಯ ಹಾಕಿದ್ದರು. ಇಂದಿಗೂ ಮೇಲ್ಜಾತಿಯವರ ಅಟ್ಟಹಾಸ, ಜಾತಿ ತಾರತಮ್ಯ, ಜಾತಿ ದ್ವೇಷ, ಅಸ್ಪೃಶ್ಯತೆ, ದಲಿತರನ್ನು ಒಪ್ಪಿಕೊಳ್ಳಲಾಗದಂತ ಮನಸ್ಥಿತಿ ಆಳವಾಗಿದೆ ಎಂಬುವುದಕ್ಕೆ ಈ ಘಟನೆ ಸಾಕ್ಷಿಯಾಗಿದ್ದು, ಹತ್ಯೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಮಹದೇವ ಬಾಗೂರ ಪ್ರಜಾವಾಣಿಗೆ ತಿಳಿಸಿದರು.</p>.<p>‘ಮಹದೇವ ಬಾಗೂರ ಅವರ ಮನವೊಲಿಸಿ ಸದ್ಯ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲಾಗಿದೆ’ ಎಂದು ಸಿಪಿಐ ರವಿಕುಮಾರ ಕಪ್ಪತ್ತನವರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>