<p><strong>ಹುಬ್ಬಳ್ಳಿ: </strong>ನವರಾತ್ರಿಯ ಮೊದಲ ದಿನವಾದ ಗುರುವಾರ ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ದೇವಿಯರ ದರ್ಶನ ಪಡೆದರು.</p>.<p>ಹೊಸೂರಿನ ದುರ್ಗಾದೇವಿ ದೇವಸ್ಥಾನ, ದಾಜೀಬಾನಪೇಟೆಯ ತುಳಜಾಭವಾನಿ ದೇವಸ್ಥಾನ, ಬನಶಂಕರಿ ಬಡಾವಣೆಯ ಬನಶಂಕರಿದೇವಿ ದೇವಸ್ಥಾನ ಸೇರಿದಂತೆ ಹಲವೆಡೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಉಣಕಲ್ ಕೆರೆ ದಂಡೆಯ ಸಮೀಪ ಇರುವ ವೀರಭದ್ರೇಶ್ವರ ಕಾಲೊನಿಯ ಶಾಕ್ತ ಪೀಠದ ತುಳಜಾ ಭವಾನಿ, ಭವಾನಿಶಂಕರ ದೇವಸ್ಥಾನದಲ್ಲಿ ಗುರುವಾರ ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾದವು.</p>.<p>ಮೊದಲ ದಿನ ದೇವಿಯರ ಮೂರ್ತಿಗಳ ಮೆರವಣಿಗೆ, ಅಭಿಷೇಕ, ಅಲಂಕಾರ, ಘಟಸ್ಥಾಪನೆ, ಮಂಗಳಾರತಿ, ಸಪ್ತಶತಿ ಪಾರಾಯಣ, ನವಚಂಡಿ ಹವನ, ಪೂರ್ಣಾಹುತಿ, ಮಹಾಮಂಗಳಾರತಿ ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಿದವು.</p>.<p>‘ತುಳಜಾಭವಾನಿ ದೇವಸ್ಥಾನದಲ್ಲಿ 9 ದಿನಗಳ ಕಾಲ ವಿಶೇಷ ಪೂಜೆಗಳು ನಡೆಯಲಿವೆ’ ಎಂದು ತುಳಜಾಭವಾನಿ ದೇವಸ್ಥಾನ ಸಮಿತಿಯ ಕಾರ್ಯದರ್ಶಿ ನಾರಾಯಣ ಖೋಡೆ ಹೇಳಿದರು.</p>.<p>ಭಂಡಿವಾಡದಲ್ಲಿ ನವರಾತ್ರಿ: ತಾಲ್ಲೂಕಿನ ಭಂಡಿವಾಡ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ನವರಾತ್ರಿಯ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು.</p>.<p>ಭಂಡಿವಾಡದ ಗಿರೀಶ ಆಶ್ರಮದ ಬಾಲಪ್ಪ ಮಹಾರಾಜರು ಸೇರಿದಂತೆ ಹಲವರು ನಿತ್ಯ ಪ್ರವಚನ ನೀಡಲಿದ್ದಾರೆ ಎಂದು ಭಂಡಿವಾಡ ಮಾರುತಿ ಟ್ರಸ್ಟ್ ಸಮಿತಿ ಹಾಗೂ ಗ್ರಾಮ ದೇವಿ ಭಜನಾ ಸಂಘದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನವರಾತ್ರಿಯ ಮೊದಲ ದಿನವಾದ ಗುರುವಾರ ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ದೇವಿಯರ ದರ್ಶನ ಪಡೆದರು.</p>.<p>ಹೊಸೂರಿನ ದುರ್ಗಾದೇವಿ ದೇವಸ್ಥಾನ, ದಾಜೀಬಾನಪೇಟೆಯ ತುಳಜಾಭವಾನಿ ದೇವಸ್ಥಾನ, ಬನಶಂಕರಿ ಬಡಾವಣೆಯ ಬನಶಂಕರಿದೇವಿ ದೇವಸ್ಥಾನ ಸೇರಿದಂತೆ ಹಲವೆಡೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಉಣಕಲ್ ಕೆರೆ ದಂಡೆಯ ಸಮೀಪ ಇರುವ ವೀರಭದ್ರೇಶ್ವರ ಕಾಲೊನಿಯ ಶಾಕ್ತ ಪೀಠದ ತುಳಜಾ ಭವಾನಿ, ಭವಾನಿಶಂಕರ ದೇವಸ್ಥಾನದಲ್ಲಿ ಗುರುವಾರ ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾದವು.</p>.<p>ಮೊದಲ ದಿನ ದೇವಿಯರ ಮೂರ್ತಿಗಳ ಮೆರವಣಿಗೆ, ಅಭಿಷೇಕ, ಅಲಂಕಾರ, ಘಟಸ್ಥಾಪನೆ, ಮಂಗಳಾರತಿ, ಸಪ್ತಶತಿ ಪಾರಾಯಣ, ನವಚಂಡಿ ಹವನ, ಪೂರ್ಣಾಹುತಿ, ಮಹಾಮಂಗಳಾರತಿ ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಿದವು.</p>.<p>‘ತುಳಜಾಭವಾನಿ ದೇವಸ್ಥಾನದಲ್ಲಿ 9 ದಿನಗಳ ಕಾಲ ವಿಶೇಷ ಪೂಜೆಗಳು ನಡೆಯಲಿವೆ’ ಎಂದು ತುಳಜಾಭವಾನಿ ದೇವಸ್ಥಾನ ಸಮಿತಿಯ ಕಾರ್ಯದರ್ಶಿ ನಾರಾಯಣ ಖೋಡೆ ಹೇಳಿದರು.</p>.<p>ಭಂಡಿವಾಡದಲ್ಲಿ ನವರಾತ್ರಿ: ತಾಲ್ಲೂಕಿನ ಭಂಡಿವಾಡ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ನವರಾತ್ರಿಯ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು.</p>.<p>ಭಂಡಿವಾಡದ ಗಿರೀಶ ಆಶ್ರಮದ ಬಾಲಪ್ಪ ಮಹಾರಾಜರು ಸೇರಿದಂತೆ ಹಲವರು ನಿತ್ಯ ಪ್ರವಚನ ನೀಡಲಿದ್ದಾರೆ ಎಂದು ಭಂಡಿವಾಡ ಮಾರುತಿ ಟ್ರಸ್ಟ್ ಸಮಿತಿ ಹಾಗೂ ಗ್ರಾಮ ದೇವಿ ಭಜನಾ ಸಂಘದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>